ಕಲಬುರಗಿ:ವಿಶ್ವ ಹಿಂದೂ ಪರಿಷತ್, ಬಜರಂಗದಳದ ಶ್ರೀ ಹನುಮ ಮಾಲಾ ಕಾರ್ಯಕ್ರಮದ ನಿಮಿತ್ತ ಕಲಬುರಗಿ ಜಿಲ್ಲೆಯಿಂದ ಕೊಪ್ಪಳದ ಕಿಷ್ಕಿಂದೆಯ ಆನೆಗೊಂದಿ ಅಂಜನಾದ್ರಿ ಪರ್ವತಕ್ಕೆ ನೂರಾರು ಹನುಮ ಮಾಲಾಧಾರಿಗಳು ಪ್ರಯಾಣ ಬೆಳೆಸಿದ್ದಾರೆ.
ನಗರದ ನೆಹರೂ ಗಂಜ್ ಪ್ರದೇಶದ ಹನುಮ ಮಂದಿರದಲ್ಲಿ ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ್ ನೇತೃತ್ವದಲ್ಲಿ ಹನುಮಂತ ದೇವರಿಗೆ ರುದ್ರಾಭಿಷೇಕ, ಹೋಮ ಹವನ, ನವಗ್ರಹ ಪೂಜೆಯ ನಂತರ 450 ಜನ ಹನುಮ ಭಕ್ತರು ಮಾಲಾಧಾರಣೆ ಮಾಡಿದರು. ಬಳಿಕ ಗಂಜ್ ಪ್ರದೇಶದಿಂದ 11 ರಾಜಹಂಸ ಡಿಲಕ್ಸ್ ಬಸ್ಗಳಿಗೆ ಚಂದು ಪಾಟೀಲ್ ಚಾಲನೆ ನೀಡುವ ಮುಖಾಂತರ ಮಾಲಾಧಾರಿಗಳು ಕೊಪ್ಪಳಕ್ಕೆ ಪ್ರಯಾಣ ಬೆಳೆಸಿದ್ದಾರೆ.