ಕರ್ನಾಟಕ

karnataka

ETV Bharat / state

ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಲೋಪದೋಷ ಆರೋಪ.. ಬಸವದಳದ ನೇತೃತ್ವದಲ್ಲಿ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಸವ ದಳ ಸಂಘಟನೆಯ ಕಾರ್ಯಕರ್ತರು, ಲಿಂಗಾಯತ ಪ್ರಮಾಣ ಪತ್ರ ಕೇಳಿದ್ರೆ ವೀರಶೈವ ಲಿಂಗಾಯತ ಎಂದು ನಮೂದು ಮಾಡಲಾಗ್ತಿದೆ..

By

Published : Sep 19, 2020, 4:03 PM IST

protest in kalburagi
ರಾಷ್ಟ್ರೀಯ ಬಸವ ದಳದ ನೇತೃತ್ವದಲ್ಲಿ ಪ್ರತಿಭಟನೆ

ಕಲಬುರಗಿ :ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಲೋಪದೋಷ ಕಂಡು ಬರುತ್ತಿವೆ ಎಂದು ಆರೋಪಿಸಿ ರಾಷ್ಟ್ರೀಯ ಬಸವ ದಳದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಷ್ಟ್ರೀಯ ಬಸವ ದಳದ ನೇತೃತ್ವದಲ್ಲಿ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಸವ ದಳ ಸಂಘಟನೆಯ ಕಾರ್ಯಕರ್ತರು, ಲಿಂಗಾಯತ ಪ್ರಮಾಣ ಪತ್ರ ಕೇಳಿದ್ರೆ ವೀರಶೈವ ಲಿಂಗಾಯತ ಎಂದು ನಮೂದು ಮಾಡಲಾಗ್ತಿದೆ.

ಬೇರೆ ಜಾತಿಯವರಿಗೆ ಕೇಳಿದಂತೆಯೇ ಪ್ರಮಾಣ ಪತ್ರ ನೀಡಲಾಗುತ್ತಿದೆ. ಆದರೆ, ಲಿಂಗಾಯತರಿಗೆ ಮಾತ್ರ ಪ್ರಮಾಣ ಪತ್ರ ನೀಡುವಲ್ಲಿ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಕೂಡಲೇ ಲೋಪದೋಷ ಸರಿಪಡಿಸಿ ಲಿಂಗಾಯತ ಎಂದೇ ಜಾತಿ ಪ್ರಮಾಣ ಪತ್ರ ನೀಡುವಂತೆ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ABOUT THE AUTHOR

...view details