ಕರ್ನಾಟಕ

karnataka

By

Published : Aug 5, 2020, 2:50 PM IST

ETV Bharat / state

ಕೋವಿಡ್ ಗುಣಮುಖನಾದ ಸಿಬ್ಬಂದಿಗೆ ನ್ಯಾಯಮೂರ್ತಿಯಿಂದ ಸನ್ಮಾನ

ಕೊರೊನಾ ಸೋಂಕಿನಿಂದ ಗುಣಮುಖರಾದ ಕರ್ನಾಟಕ ಉಚ್ಛ ನ್ಯಾಯಾಲಯ ಕಲಬುರಗಿ ಪೀಠದ ಮಹಿಳಾ ಸಿಬ್ಬಂದಿಯನ್ನು ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಸನ್ಮಾನಿಸಿದರು.

justice-ba-patil-honored-by-covid-recovery-patient
ಕೋವಿಡ್ ಗುಣಮುಖ ಸಿಬ್ಬಂದಿ ಸನ್ಮಾನಿಸಿದ ನ್ಯಾಯಮೂರ್ತಿ

ಕಲಬುರಗಿ: ಕೋವಿಡ್ -19 ಸೋಂಕಿಗೊಳಗಾಗಿ ನಗರದ ಬುದ್ಧವಿಹಾರ ಕ್ವಾರಂಟೈನ್ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಕಲಬುರಗಿ ಪೀಠದ ಮಹಿಳಾ ಸಿಬ್ಬಂದಿಗೆ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಹೂಗುಚ್ಛ ನೀಡಿ ಸನ್ಮಾನಿಸಿದರು.

ನಂತರ ಮಾತನಾಡಿದ ನ್ಯಾಯಮೂರ್ತಿಗಳು, ನೀವು ನಮ್ಮೆಲ್ಲರ ಕುಟುಂಬದ ಸದಸ್ಯರಿದ್ದಂತೆ. ಯಾವುದೇ ಅಂಜಿಕೆಯಿಲ್ಲದೆ ಕರ್ತವ್ಯ ನಿರ್ವಹಿಸುವಂತೆ ಧೈರ್ಯ ತುಂಬಿದರು. ಜೊತೆಗೆ ಎಲ್ಲರೂ ಮಾಸ್ಕ್, ಸ್ಯಾನಿಟೈಸರ್ ಬಳಸುವ ಮೂಲಕ ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಕರೆ ನೀಡಿದರು.

ABOUT THE AUTHOR

...view details