ಕರ್ನಾಟಕ

karnataka

ETV Bharat / state

ಆರ್‌ಸಿಇಪಿ ಒಪ್ಪಂದದಿಂದ ಹಿಂದೆ ಸರಿಯುವಂತೆ ರೈತರ ಪ್ರತಿಭಟನೆ.. - farmers protest at kalaburagi

ಕೇಂದ್ರ ಸರ್ಕಾರ ಆರ್‌ಸಿಇಪಿ ಒಪ್ಪಂದದಿಂದ ಹೊರಬರುವಂತೆ ಒತ್ತಾಯಿಸಿ ರೈತ-ಕೃಷಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಎಸ್​ವಿಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ರೈತರ ಪ್ರತಿಭಟನೆ

By

Published : Oct 22, 2019, 5:05 PM IST

ಕಲಬುರಗಿ :ವಿದೇಶಿ ಹಾಲು ಮತ್ತು ಡೈರಿ ಉತ್ಪನ್ನಗಳ ಮುಕ್ತ ಪ್ರವೇಶಕ್ಕೆ ಅವಕಾಶ ನೀಡುವ ಆರ್‌ಸಿಇಪಿ ಒಪ್ಪಂದದಿಂದ ಹೊರಬರುವಂತೆ ಒತ್ತಾಯಿಸಿ ರೈತ-ಕೃಷಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆ ನಡೆಸುತ್ತಿರುವ ರೈತರು

ಎಸ್​ವಿಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು,ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಆರ್‌ಸಿಇಪಿ ಒಪ್ಪಂದಕ್ಕೆ ಭಾರತ ಸಹಿ ಹಾಕಿದಲ್ಲಿ ಅದು ರೈತರ ಪಾಲಿನ ಮರಣ ಶಾಸನವಾಗಲಿದೆ. ರೈತ ವಿರೋಧಿಯಾಗಿರೋ ಈ‌ ಒಪ್ಪಂದದಿಂದ ಕೇಂದ್ರ ಸರ್ಕಾರ ಕೂಡಲೇ ಹಿಂದೆ ಸರಿಯಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನಮಂತ್ರಿಗಳಿಗೆ ಮನವಿ‌ ಸಲ್ಲಿಸಿದ್ದಾರೆ.

ABOUT THE AUTHOR

...view details