ಕರ್ನಾಟಕ

karnataka

ETV Bharat / state

ಕಲ್ಯಾಣ ಕರ್ನಾಟಕದ ಪೊಲೀಸ್ ಹುದ್ದೆಗಳು ಬೇರೆಡೆಗೆ ವರ್ಗ‌.. ಎಂ ಎಸ್ ಪಾಟೀಲ ನರಿಬೋಳ ಆಪಾದನೆ - ಕಲ್ಯಾಣ ಕರ್ನಾಟಕದ ಪೊಲೀಸ್ ಹುದ್ದೆಗಳ ವರ್ಗಾವಣೆ ಆರೋಪ ಸುದ್ದಿ

14 ಪೊಲೀಸ್ ಇನ್ಸ್​​ಪೆಕ್ಟರ್ ಹುದ್ದೆಗಳನ್ನು ಬೇರೆಡೆ ವರ್ಗಾವಣೆ ಮಾಡಲಾಗುತ್ತಿದೆ. ಇದರಿಂದ ಈ ಭಾಗದ ಹುದ್ದೆಗಳನ್ನು ಕಿತ್ತುಕೊಂಡಂತಾಗುತ್ತದೆ. ರಾಜ್ಯ ಸರ್ಕಾರದಿಂದ ಪದೇಪದೆ ಈ ಭಾಗಕ್ಕೆ ಅನ್ಯಾಯ ನಡೆಯುತ್ತಿದೆ..

kalyana karnataka police jobs tranfer alligations
ಎಂ.ಎಸ್.ಪಾಟೀಲ ನರಿಬೋಳ ಆರೋಪ

By

Published : Sep 20, 2020, 9:01 PM IST

ಕಲಬುರಗಿ: ಕಲ್ಯಾಣ ಕರ್ನಾಟಕದ ಪೊಲೀಸ್ ಹುದ್ದೆಗಳನ್ನು ಬೇರೆಡೆಗೆ ವರ್ಗ ಮಾಡಿ ಹಿಂದುಳಿದ ಭಾಗಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಆರೋಪಿಸಿದೆ.

ಎಂ ಎಸ್ ಪಾಟೀಲ್‌ ನರಿಬೋಳ ಆರೋಪ
ಕಲಬುರಗಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಎಂ ಎಸ್ ಪಾಟೀಲ್ ನರಿಬೋಳ, ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳ ಡಿಸಿಐಬಿ ಮತ್ತು ಡಿಸಿಆರ್​​ಬಿ ವಿಭಾಗದ ಹುದ್ದೆಗಳನ್ನು ರದ್ದುಗೊಳಿಸಿ ಬೇರೆಡೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ರು.
14 ಪೊಲೀಸ್ ಇನ್ಸ್​​ಪೆಕ್ಟರ್ ಹುದ್ದೆಗಳನ್ನು ಬೇರೆಡೆ ವರ್ಗಾವಣೆ ಮಾಡಲಾಗುತ್ತಿದೆ. ಇದರಿಂದ ಈ ಭಾಗದ ಹುದ್ದೆಗಳನ್ನು ಕಿತ್ತುಕೊಂಡಂತಾಗುತ್ತದೆ. ರಾಜ್ಯ ಸರ್ಕಾರದಿಂದ ಪದೇಪದೆ ಈ ಭಾಗಕ್ಕೆ ಅನ್ಯಾಯ ನಡೆಯುತ್ತಿದೆ. ಕೂಡಲೇ ಇಲ್ಲಿಯ ಇನ್ಸ್​​ಪೆಕ್ಟರ್ ಹುದ್ದೆಗಳನ್ನು ಈ ಭಾಗದಲ್ಲಿಯೇ ಮುಂದುವರೆಸಬೇಕು ಎಂದು ಆಗ್ರಹಿಸಿದ್ರು.

ABOUT THE AUTHOR

...view details