ಕರ್ನಾಟಕ

karnataka

By

Published : Mar 7, 2020, 3:52 AM IST

ETV Bharat / state

ಟ್ಯಾಂಕರ್​ಗೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿ: 15 ಜನರಿಗೆ ಗಾಯ

ಟ್ಯಾಂಕರ್​ಗೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸುಮಾರು 15 ಜನ ಗಾಯಗೊಂಡಿದ್ದಾರೆ. ಸೇಡಂ ತಾಲೂಕಿನ ಮಳಖೇಡ ಅಪಘಾತ ಜರುಗಿದೆ.

KSRTC bus collides with tanker in kalburgi
ಟ್ಯಾಂಕರ್​ಗೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿ

ಕಲಬುರಗಿ: ಟ್ಯಾಂಕರ್​ಗೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸುಮಾರು 15 ಜನರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಸೇಡಂ ತಾಲೂಕಿನ ಮಳಖೇಡ ಸಮೀಪ ಜರುಗಿದೆ.

ಕಲಬುರಗಿಯಿಂದ ಸೇಡಂನತ್ತ ತೆರಳುತ್ತಿದ್ದ ಟ್ಯಾಂಕರ್​ಗೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಹಲವರಿಗೆ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಳಖೇಡ ಪಿಎಸ್ಐ ಶಿವಶಂಕರ ಸಾಹು ತಿಳಿಸಿದ್ದಾರೆ.

ಘಟನೆ ನಡೆದ ತಕ್ಷಣ ಆಂಬ್ಯುಲೆನ್ಸ್ ಮೂಲಕ ಸೇಡಂ ಆಸ್ಪತ್ರೆಗೆ ಗಾಯಗೊಂಡವರನ್ನು ರವಾನಿಸಿ, ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.

ABOUT THE AUTHOR

...view details