ಕರ್ನಾಟಕ

karnataka

By

Published : Aug 15, 2020, 7:04 PM IST

ETV Bharat / state

‘ಕೋವಿಡ್​ ಆಸ್ಪತ್ರೆಗಳಲ್ಲಿ ನೀಡುವ ಚಿಕಿತ್ಸೆ ಬಗ್ಗೆ ಸಿಎಂ, ಸಚಿವರಿಗೆ ನಂಬಿಕೆ ಇಲ್ಲ’

ಬೆಡ್ ಕೊರತೆ, ಆ್ಯಂಬುಲೆನ್ಸ್ ಸರಿಯಾದ ಸಮಯಕ್ಕೆ ಬರುವುದಿಲ್ಲ ಎಂಬ ದೂರುಗಳಿವೆ. ಹೀಗಾಗಿ, ಕೊರೊನಾ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗುವ ಹಾಗೆ ಸರ್ಕಾರ ನೋಡಿಕೊಳ್ಳಬೇಕು ಎಂದು ಶಾಸಕ ಪ್ರಿಯಾಂಕ್​ ಖರ್ಗೆ ಒತ್ತಾಯಿಸಿದರು.

priyank_kharge
ಶಾಸಕ ಪ್ರಿಯಾಂಕ್ ಖರ್ಗೆ

ಕಲಬುರಗಿ:ಸರ್ಕಾರಿ ಕೋವಿಡ್​-19 ಆಸ್ಪತ್ರೆಗಳ ವ್ಯವಸ್ಥೆ ಮತ್ತು ಚಿಕಿತ್ಸೆ ಮೇಲೆ ಸ್ವತಃ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮತ್ತು ಸಚಿವರಿಗೇ ನಂಬಿಕೆ ಇಲ್ಲ. ಹೀಗಾಗಿಯೇ ಸೋಂಕಿತರಾಗಿದ್ದಾಗ ಸಿಎಂ ಹಾಗೂ ಸಚಿವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಶಾಸಕ ಪ್ರಿಯಾಂಕ್​ ಖರ್ಗೆ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸೇರಿದಂತೆ ಹಲವು ಸಚಿವರಿಗೆ ಕೊರೊನಾ ಸೋಂಕು ತಗುಲಿತ್ತು. ಆದರೆ, ಯಾರೊಬ್ಬರೂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿಲ್ಲ. ಹೀಗಿರುವಾಗ ಜನಸಾಮಾನ್ಯರು ಹೇಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆ ಇಡಬೇಕು? ಎಂದು ವಾಗ್ದಾಳಿ ನಡೆಸಿದರು.

ಆರೋಗ್ಯ ಸಚಿವ ಶ್ರೀರಾಮಲು ಮಾತ್ರ ಎರಡು ದಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಅದಾದ ಬಳಿಕ ಮುಂದಿನ ಚಿಕಿತ್ಸೆ ಎಲ್ಲಿ ಪಡೆದರೋ ಗೊತ್ತಿಲ್ಲ. ಆದರೆ, ಉಳಿದವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡರು. ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡುವ ಚಿಕಿತ್ಸೆ ಮೇಲೆ ಸಚಿವರಿಗೇ ನಂಬಿಕೆ ಇಲ್ಲವಾದ ಕಾರಣ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಾಸಗಿ ಆಸ್ಪತ್ರೆ ಮೊರೆ ಹೋಗಬೇಕಾಯಿತು. ಇಷ್ಟರ ಮಟ್ಟಿಗೆ ಸರ್ಕಾರ ವೈಫಲ್ಯ ಕಂಡಿದೆ ಎಂದು ಆರೋಪಿಸಿದರು.

ಶಾಸಕ ಪ್ರಿಯಾಂಕ್ ಖರ್ಗೆ

ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಕೊರೊನಾ ವಿಚಾರದಲ್ಲಿ ಸರ್ಕಾರಕ್ಕಿಂತ ಕಾಂಗ್ರೆಸ್ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಸರ್ಕಾರ ಸರಿಯಾಗಿ ಕೊರೊನಾ ಸರ್ವೆ ಕಾರ್ಯ ಮಾಡುತ್ತಿಲ್ಲ. ಕೋವಿಡ್ ಸುರಕ್ಷತಾ ಚಕ್ರ ಸಹಾಯವಾಣಿ ಆರಂಭಿಸುವುದು ಕೆಕೆಆರ್‌ಡಿಬಿ ಕೆಲಸನಾ ಎಂದು ಪ್ರಶ್ನಿಸಿದರು.

ABOUT THE AUTHOR

...view details