ಕರ್ನಾಟಕ

karnataka

By

Published : Aug 25, 2019, 3:01 AM IST

ETV Bharat / state

ಜೀವನದಲ್ಲಿ ಜಿಗುಪ್ಸೆ... ರೈಲು ಹಳಿಗೆ ತಲೆಕೊಟ್ಟು ವೃದ್ಧ ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆ ಹೊಂದಿದ ವೃದ್ಧನೋರ್ವ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಬಬಲಾದ ಗ್ರಾಮದ ಬಳಿ ನಡೆದಿದೆ.

ಜೀವನದಲ್ಲಿ ಜಿಗುಪ್ಸೆ..

ಕಲಬುರಗಿ: ಜೀವನದಲ್ಲಿ ಜಿಗುಪ್ಸೆ ಹೊಂದಿದ ವೃದ್ಧನೋರ್ವ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಬಬಲಾದ ಗ್ರಾಮದ ಬಳಿ ನಡೆದಿದೆ.

ಯಳವಂತಿಗಿ ಗ್ರಾಮದ ನಿವಾಸಿ ಶಿವರುದ್ರಪ್ಪ(70) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳಿಂದ ಶಿವರುದ್ರಪ್ಪ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯಕ್ಕೆ ತುತ್ತಾಗಿದ್ದ ಅವರು ಜಿಗುಪ್ಸೆ ಹೊಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಬಬಲಾದ ರೈಲ್ವೆ ನಿಲ್ದಾಣದ ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಕುರಿತು ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ವಾಡಿ ಠಾಣೆ ಪಿಎಸ್ಐ ವೀರಭದ್ರಪ್ಪ ಭೇಟಿ ನೀಡಿ‌ ಪರಿಶೀಲನೆ ನಡೆಸಿದರು.

ABOUT THE AUTHOR

...view details