ಕಲಬುರಗಿ:ಈ ವರ್ಷ ಶೂ-ಸಾಕ್ಸ್ ಕೊಡ್ತಿರೋ ಇಲ್ವೋ ಎಂಬ ಪ್ರಶ್ನೆಗೆ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಮಾಧ್ಯಮದವರ ಪ್ರಶ್ನೆಗಳಿಗೆ ಹಾರಿಕೆ ಉತ್ತರ ನೀಡಿದ್ದಾರೆ.
ಸರ್ಕಾರ ಮಕ್ಕಳಿಗೆ ಶೂ- ಸಾಕ್ಸ್ ಸ್ಥಗಿತಗೊಳಿಸಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಬಿ. ಸಿ ನಾಗೇಶ್ ಸಿಡಿಮಿಡಿಗೊಂಡರು. ಸಿದ್ದರಾಮಯ್ಯ ಏನು ಸರ್ಕಾರನಾ? ಅವರು 100 ಸುಳ್ಳು ಹೇಳುವುದರಲ್ಲಿ ಇದು 101 ನೇ ಸುಳ್ಳು ಅಷ್ಟೇ. ಮಕ್ಕಳು ಶಾಲೆಗೆ ಬರುವುದು ಶಿಕ್ಷಣಕ್ಕಾಗಿ. ಅವರ ಅವಧಿಯಲ್ಲಿ ಕ್ವಾಲಿಟಿ ಎಜುಕೇಶನ್ ಎಷ್ಟರ ಮಟ್ಟಿಗೆ ಕೊಟ್ಟಿದ್ದಾರೆ ಕೇಳಿ. ಕಲಿಕಾ ಚೇತರಿಕೆಗೆ 146 ಕೋಟಿ ರೂ. ಖರ್ಚು ಮಾಡಿದ್ದೆವು. ಕೊರೊನಾದಿಂದ ಆರ್ಥಿಕ ಹೊಡೆತ ಬಿದ್ದಿದೆ. ಶೂ- ಸಾಕ್ಸ್ ಕೊಡೋಕೆ ಆಗಲ್ಲ ಅಂತಾ ನಾವು ಎಲ್ಲೂ ಹೇಳಿಲ್ಲ. ಶೂ ಸಾಕ್ಸ್ಗಿಂತ ನಾವು ಗುಣಮಟ್ಟದ ಶಿಕ್ಷಣಕ್ಕೆ ಒತ್ತುಕೊಟ್ಟಿದ್ದೇವೆ ಎಂದರು.
ಶೂ- ಸಾಕ್ಸ್ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ. ನೀವು ಎಷ್ಟೇ ಸಲ ಪ್ರಶ್ನೆ ಕೇಳಿದ್ರು ನಾ ಹೇಳೊದೊಂದೆ. ಇನ್ನೂ ಏನೂ ನಿರ್ಣಯ ತಗೊಂಡಿಲ್ಲ, ತಗೊಂಡಿಲ್ಲ ಅಂತಾ ಸುಮಾರು ಹತ್ತು ಬಾರಿ ಹೇಳಿದ್ರು.