ಕರ್ನಾಟಕ

karnataka

ETV Bharat / state

ಪ್ರಚಾರಕ್ಕೆ ಹೋದವರಿಗೆ ಗ್ರಾಮಸ್ಥರಿಂದ ಘೇರಾವ್​​​... ಜಾಧವ್​ ಕೈ ಬಿಟ್ಟಿದ್ದಕ್ಕೆ ಸ್ಪಷ್ಟನೆ ಕೇಳಿದ ಜನ - Kalaburagi

ಮಾಜಿ ಸಚಿವ ವಿ ಸೋಮಣ್ಣ ಮತ್ತು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್​​ಗೆ ಚಿಂಚೋಳಿ ತಾಲೂಕಿನ ಮೋಘಾ ತಾಂಡದಲ್ಲಿ ಗ್ರಾಮಸ್ಥರು ಘೇರಾವ್ ಹಾಕಿದ್ದರು. ಉಮೇಶ್ ಜಾಧವ್‌ಗೆ ಮತ ಹಾಕಿದ್ವಿ, ಕಾರಣವಿಲ್ಲದೇ ಅವರು ಕಾಂಗ್ರೆಸ್​ ಪಕ್ಷ ಬಿಟ್ಟು ಹೋಗಿದ್ದಾರೆ. ಯಾವ ಕಾರಣಕ್ಕೆ ಅವರು ಕಾಂಗ್ರೆಸ್​ ತೊರೆದಿದ್ದಾರೆ ಅನ್ನೋದನ್ನು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದ್ದಾರೆ.

ಗ್ರಾಮಸ್ಥರಿಂದ ಘೇರಾವ್

By

Published : May 8, 2019, 7:28 PM IST

ಕಲಬುರಗಿ: ಚಿಂಚೋಳಿ ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಅವಿನಾಶ್​ ಜಾಧವ್ ಪರ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ನಾಯಕರಿಗೆ ತಾಂಡದ ಜನ ಮುತ್ತಿಗೆ ಹಾಕಿರುವ ಘಟನೆ ನಡೆದಿದೆ.

ಬಿಜೆಪಿ ನಾಯಕರಿಗೆ ಗ್ರಾಮಸ್ಥರಿಂದ ಘೇರಾವ್

ಮಾಜಿ ಸಚಿವ ವಿ ಸೋಮಣ್ಣ ಮತ್ತು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್​​ಗೆ ತಾಲೂಕಿನ ಮೋಘಾ ತಾಂಡದಲ್ಲಿ ಗ್ರಾಮಸ್ಥರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು. ಈ ಹಿಂದೆ ಡಾ. ಉಮೇಶ್ ಜಾಧವ್‌ಗೆ ಮತ ಹಾಕಿದ್ವಿ. ಆದ್ರೆ ಅವ್ರು ಕಾರಣವಿಲ್ಲದೇ ಕಾಂಗ್ರೆಸ್​ ಪಕ್ಷ ಬಿಟ್ಟು ಹೋಗಿದ್ದಾರೆ. ಯಾವ ಕಾರಣಕ್ಕೆ ಕಾಂಗ್ರೆಸ್​ ಬಿಟ್ಟು ಹೋಗಿದ್ದಾರೆ ಅನ್ನೋದರ ಬಗ್ಗೆ ಸ್ಪಷ್ಟಪಡಿಸುವಂತೆ ಆಗ್ರಹಿಸಿದರು.

ಮತ ಹಾಕಿದ ಜನರಿಗೆ ಮೋಸ ಮಾಡಿದ ಜಾಧವ್‌ಗೆ ನಮ್ಮ ಗ್ರಾಮಕ್ಕೆ ಬಂದು ಮತ ಕೇಳುವ ಹಕ್ಕಿಲ್ಲವೆಂದು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು, ಪ್ರಚಾರಕ್ಕೂ ಅಡ್ಡಿಪಡಿಸಿದ್ದಾರೆ. ಈ ಹಿನ್ನಲೆ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಿಜೆಪಿ ನಾಯಕರು ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ಅಲ್ಲಿಂದ ಕಾಲ್ಕಿತ್ತಿದ್ದಾರೆ.

For All Latest Updates

TAGGED:

Kalaburagi

ABOUT THE AUTHOR

...view details