ಕರ್ನಾಟಕ

karnataka

By

Published : Jul 16, 2020, 11:32 AM IST

ETV Bharat / state

ಮುಲ್ಲಾಮಾರಿ ಜಲಾಶಯದಿಂದ ನೀರು ಬಿಡುಗಡೆ: ಹಳ್ಳಿಗಳು ಜಲಾವೃತ, ದೇವಸ್ಥಾನದಲ್ಲಿ ಸಿಲುಕಿದ್ದ ಐವರ ರಕ್ಷಣೆ

ಮುಲ್ಲಾಮಾರಿ ಜಲಾಶಯದ ನೀರನ್ನು ಯಾವುದೇ ಮುನ್ಸೂಚನೆ ಇಲ್ಲದೆ ನದಿಗೆ ಬಿಟ್ಟ ಹಿನ್ನೆಲೆ ನದಿ ಪಾತ್ರದ ಹಳ್ಳಿಗಳಿಗೆ ನೀರು ನುಗ್ಗಿದೆ. ಚಿಂಚೋಳಿ ಪಟ್ಟಣದ ತಗ್ಗು ಪ್ರದೇಶಕ್ಕೂ ನೀರು ನುಗ್ಗಿದ್ದು, ದೇವಸ್ಥಾನಗಳು ಜಲಾವೃತವಾಗಿವೆ.

Release of water from the Mullamari reservoir
ಮುಲ್ಲಾಮಾರಿ ಜಲಾಶಯದ ನೀರು ಬಿಡುಗಡೆ

ಕಲಬುರಗಿ:ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಚಿಂಚೋಳಿ ತಾಲೂಕಿನ ಮುಲ್ಲಾಮಾರಿ ಜಲಾಶಯದ ನೀರನ್ನು ನದಿಗೆ ಬಿಡಲಾಗಿದೆ. ಜಲಾಶಯದ ಐದು ಗೇಟ್​​ಗಳ ಮೂಲಕ 5 ಸಾವಿರ ಕ್ಯೂಸೆಕ್​​ ನೀರು ನದಿಗೆ ಬಿಡಲಾಗಿದೆ.

ಯಾವುದೇ ಮುನ್ಸೂಚನೆ ಇಲ್ಲದೆ ನೀರು ಬಿಟ್ಟ ಹಿನ್ನೆಲೆ ನದಿ ಪಾತ್ರದ ಹಳ್ಳಿಗಳಿಗೆ ನೀರು ನುಗ್ಗಿದೆ. ಚಿಂಚೋಳಿ ಪಟ್ಟಣದ ತಗ್ಗು ಪ್ರದೇಶಕ್ಕೂ ನೀರು ನುಗ್ಗಿದ್ದು, ದೇವಸ್ಥಾನಗಳು ಜಲಾವೃತವಾಗಿವೆ.

ಮುಲ್ಲಾಮಾರಿ ಜಲಾಶಯದ ನೀರು ಬಿಡುಗಡೆ

ದೇವಸ್ಥಾನದಲ್ಲಿ ಸಿಲುಕಿದ್ದ ಐವರ ರಕ್ಷಣೆ:

ನೀರು ನುಗ್ಗಿದ ಹಿನ್ನೆಲೆ ಚಿಂಚೋಳಿಯ ಚಂದಾಪುರದ ಹನುಮಾನ ದೇವಸ್ಥಾದಲ್ಲಿ ಸಿಲುಕಿದ್ದ ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಚಿಮ್ಮನಚೋಡ ಗ್ರಾಮದ ಸಂಗಮೇಶ್ವರ ದೇವಸ್ಥಾನ ಕೊಡ ಜಲಾವೃತವಾಗಿದ್ದು, ಈ ದೇವಸ್ಥಾನದಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು ಗ್ರಾಮಸ್ಥರೇ ರಕ್ಷಣೆ ಮಾಡಿದ್ದಾರೆ.

ABOUT THE AUTHOR

...view details