ಕರ್ನಾಟಕ

karnataka

ETV Bharat / state

ಕೊಪ್ಪಳದಿಂದ ಕೈ ಲೋಕಸಭೆ ಅಭ್ಯರ್ಥಿಯಾಗಿ ಶಿವರಾಜ್​ ತಂಗಡಗಿ... ಕುತೂಹಲ ಮೂಡಿಸಿದ ಪೋಸ್ಟ್​​!

ವ್ಯಾಪಕ ಚರ್ಚೆಗೆ ಗುರಿಯಾದ 'ಬಿಗ್ ಬ್ರೇಕಿಂಗ್ ನ್ಯೂಸ್, ಕೊಪ್ಪಳ ಲೋಕಸಭೆ ಅಭ್ಯರ್ಥಿಯಾಗಿ ಶ್ರೀ ಶಿವರಾಜ ತಂಗಡಗಿ ಆಯ್ಕೆ" ಪೋಸ್ಟ್,

By

Published : Mar 12, 2019, 5:10 PM IST

ಮಾಜಿ ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಕೊಪ್ಪಳ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆಯಲು ಆಕಾಂಕ್ಷಿಗಳು ದೆಹಲಿಯಲ್ಲಿ ಬೀಡು ಬಿಟ್ಟು ಕಸರತ್ತು ನಡೆಸಿದ್ದಾರೆ.

ಈ ನಡುವೆ ಅಭ್ಯರ್ಥಿಯಾಗಿ ಮಾಜಿ ಸಚಿವ ಶಿವರಾಜ್ ತಂಗಡಗಿ ಆಯ್ಕೆಯಾಗಿದ್ದಾರೆ ಎಂದು ಫೇಸ್​​ಬುಕ್​ನಲ್ಲಿ ಪೋಸ್ಟೊಂದು ಇಂದು ಮಧ್ಯಾಹ್ನದಿಂದ ಹರಿದಾಡುತ್ತಿದ್ದು, ಭಾರಿ ಚರ್ಚೆಗೆ ಕಾರಣವಾಗಿದೆ. ಜಿಲ್ಲೆಯ ಗಂಗಾವತಿ ತಾಲೂಕಿನ ಸಿದ್ದಾಪುರ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಫೇಸ್​ಬುಕ್ ಪೇಜ್​​ನಲ್ಲಿ ಶಿವರಾಜ್​ ತಂಗಡಗಿ ಲೋಕಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ ಎಂದು ಅವರ ಅಭಿಮಾನಿಗಳು ಪೋಸ್ಟ್ ಮಾಡಿದ್ದಾರೆ.

ವ್ಯಾಪಕ ಚರ್ಚೆಗೆ ಗುರಿಯಾದ ಪೋಸ್ಟ್,

"ಬಿಗ್ ಬ್ರೇಕಿಂಗ್ ನ್ಯೂಸ್, ಕೊಪ್ಪಳ ಲೋಕಸಭೆ ಅಭ್ಯರ್ಥಿಯಾಗಿ ಶ್ರೀ ಶಿವರಾಜ ತಂಗಡಗಿ ಆಯ್ಕೆ" ಎಂದು ಪೋಸ್ಟ್ ಮಾಡಲಾಗಿದೆ. ಹೀಗಾಗಿ, ಸದ್ಯಕ್ಕೆ ಈ ಪೋಸ್ಟ್ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಟಿಕೆಟ್​​ಗಾಗಿ ತಂದೆ-ಮಗನ ನಡುವೆ ಪೈಪೋಟಿ ಏರ್ಪಟ್ಟಿದೆ.

ಮಾಜಿ ಶಾಸಕ ಬಸವರಾಜ ಹಿಟ್ನಾಳ್- ಜಿಪಂ ಮಾಜಿ ಅಧ್ಯಕ್ಷ ರಾಜಶೇಖರ್ ಹಿಟ್ನಾಳ್ ನಡುವೆ ಟಿಕೆಟ್​​ಗಾಗಿ ಭಾರಿ ಪೈಪೋಟಿ ನಡದಿದ್ದು, ಸದ್ಯ ಫೇಸ್​ಬುಕ್​ನಲ್ಲಿ ಮಾಡಲಾಗಿರುವ ಪೋಸ್ಟ್ ತೀವ್ರ ಕುತೂಹಲ ಮೂಡಿಸಿದೆ.

ABOUT THE AUTHOR

...view details