ಕರ್ನಾಟಕ

karnataka

ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧ ಖಂಡಿಸಿ ಶ್ರೀರಾಮ ಸೇನಾ ಪ್ರತಿಭಟನೆ

By

Published : Aug 17, 2020, 1:41 PM IST

ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಶ್ರೀರಾಮ ಸೇನೆ ಪ್ರತಿಭಟನೆ
ಶ್ರೀರಾಮ ಸೇನೆ ಪ್ರತಿಭಟನೆ

ಕಲಬುರಗಿ: ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ನಿರ್ಬಂಧ ಹೇರಿರುವುದನ್ನು ಖಂಡಿಸಿ ಶ್ರೀರಾಮ ಸೇನಾ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಶ್ರೀರಾಮ ಸೇನಾ ಪ್ರತಿಭಟನೆ

ಶತಮಾನಗಳ ಇತಿಹಾಸ ಹೊಂದಿರುವ ಗಣೇಶ ಹಬ್ಬವನ್ನು ಸರ್ಕಾರ ಕೊರೊನಾ ನೆಪವೊಡ್ಡಿ ಗಣೇಶನ ಮೇಲಿರುವ ಶ್ರದ್ಧೆ, ಭಕ್ತಿಯನ್ನು ಘಾಸಿಗೊಳಿಸಲು ಮುಂದಾಗಿದೆ ಎಂದು ಆರೋಪಿಸಿದರು.

ಕೊಡಲೇ ಸರ್ಕಾರ ನಿಷೇಧದ ಆದೇಶವನ್ನು ಹಿಂಪಡೆದು ಗಣೇಶ ಮೂರ್ತಿ ಪ್ರತಿಷ್ಠಾನೆಗೆ ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು. ಇಲ್ಲವಾದರೆ ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

ABOUT THE AUTHOR

...view details