ಕರ್ನಾಟಕ

karnataka

ETV Bharat / state

ಈಜಲು ಬಾವಿಗೆ ಇಳಿದ ಇಬ್ಬರು ಮಕ್ಕಳು ನೀರುಪಾಲು.. ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ - ಆಳಂದ ಪಟ್ಟಣದ ಹೊರವಲಯದ ಬಾವಿಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ

ಕಲಬುರಗಿಯ ಆಳಂದ ಪಟ್ಟಣದ ಹೊರವಲಯದ ಬಾವಿಯೊಂದರಲ್ಲಿ ಈಜಲು ಹೋಗಿದ್ದ ಇಬ್ಬರು ಮಕ್ಕಳು ನೀರು ಪಾಲಾಗಿರುವ ಘಟನೆ ನಡೆದಿದೆ.

ಈಜಲು ಬಾವಿಗೆ ಇಳಿದ ಇಬ್ಬರು ಮಕ್ಕಳು ನೀರುಪಾಲು
ಈಜಲು ಬಾವಿಗೆ ಇಳಿದ ಇಬ್ಬರು ಮಕ್ಕಳು ನೀರುಪಾಲು

By

Published : Jul 28, 2022, 8:03 PM IST

ಕಲಬುರಗಿ: ಬಾವಿಯೊಂದರಲ್ಲಿ ಈಜಲು ಹೋಗಿದ್ದ ಇಬ್ಬರು ಮಕ್ಕಳು ನೀರು ಪಾಲಾಗಿರುವ ಘಟನೆ ಆಳಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಬಾವಿಯಲ್ಲಿ ಮೃತರಾದ ಮಕ್ಕಳನ್ನು ಹೊರತೆಗೆದ ಪೊಲೀಸರು

ಶ್ರೀಶೈಲ್ ಲಕ್ಷ್ಮಣ (13) ಹಾಗೂ ಲಕ್ಷ್ಮಣ ಗುಂಡಪ್ಪ(12) ಈಜಲು ಹೋಗಿ ಸಾವನ್ನಪ್ಪಿದ ದುರ್ದೈವಿಗಳು. ಈ ಇಬ್ಬರು ಮಕ್ಕಳು ಹೇಬಳಿ ರೋಡ್‌ ನ್ಯೂ ಬಾಳೇನಕೇರಿ ನಿವಾಸಿಗಳು ಎಂದು ತಿಳಿದು ಬಂದಿದೆ. ಇಂದು ಮಧ್ಯಾಹ್ನ ಇಬ್ಬರು ಈಜಲು ಎಂದು ಬಾವಿಗೆ ತೆರಳಿದ್ದಾರೆ. ಈಜು ಸರಿಯಾಗಿ ಬಾರದಿದ್ದರೂ ಬಾವಿಗೆ ಇಳಿದು ದುಸ್ಸಾಹಸ ಮಾಡಿದ್ದರಿಂದ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಮಕ್ಕಳು ಸಾವನ್ನು ಕಂಡು ಸ್ಥಳೀಯರು ಸಹ ಕಣ್ಣೀರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ - ಕೇರಳದ ಸಂಪರ್ಕದ ಬಗ್ಗೆ ಪ್ರಾಥಮಿಕ ಮಾಹಿತಿ, ಆ ರಾಜ್ಯದ ಪೊಲೀಸರ ಜೊತೆಗೂ ತನಿಖೆ: ಸಿಎಂ

ABOUT THE AUTHOR

...view details