ಕರ್ನಾಟಕ

karnataka

ETV Bharat / state

ಮೀನು ಹಿಡಿಯಲು ಹೋಗಿದ್ದ ಯುವಕರು ನೀರುಪಾಲು

ಮೀನು ಹಿಡಿಯಲು ಹೋಗಿದ್ದ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಜೇವರ್ಗಿ ತಾಲೂಕಿನ ಹಾಲಗಡ್ಲಾ ಕೆರೆಯಲ್ಲಿ ನಡೆದಿದೆ.

By

Published : Mar 4, 2020, 4:41 PM IST

ಮೀನು ಹಿಡಿಯಲು ಹೋಗಿದ್ದ ಯುವಕರು ನೀರುಪಾಲು
Two youth died when they went to catching fish in lake

ಕಲಬುರಗಿ:ಮೀನು ಹಿಡಿಯಲು ಹೋಗಿದ್ದ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಜೇವರ್ಗಿ ತಾಲೂಕಿನ ಹಾಲಗಡ್ಲಾ ಕೆರೆಯಲ್ಲಿ ನಡೆದಿದೆ.

ಬಸಣ್ಣ (24), ನಾಗಣ್ಣ (18) ಮೃತ ಯುವಕರು. ಜೇವರ್ಗಿ ಹರಣೂರ ಗ್ರಾಮದ ನಿವಾಸಿಗಳಾದ ಇವರು, ಇಂದು ಬೆಳಗ್ಗೆ ಹಾಲಗಡ್ಲಾ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಗ್ರಾಮಸ್ಥರ ಸಹಾಯದಿಂದ ಯುವಕರ ಶವ ಹೊರ ತೆಗೆದಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಜೇವರ್ಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details