ಕಲಬುರಗಿ: ಮಾಜಿ ಸಚಿವ, ಹಿರಿಯ ಹೋರಾಟಗಾರ ವೈಜನಾಥ ಪಾಟೀಲರ ಪಾರ್ಥಿವ ಶರೀರಕ್ಕೆ ಡಾ. ಚಂದ್ರಶೇಖರ ಕಂಬಾರ, ದಲಿತ ಕವಿ ಡಾ. ಸಿದ್ದಲಿಂಗಯ್ಯ, ಮಾಜಿ ಸಚಿವ ಎಸ್.ಕೆ.ಕಾಂತಾ, ಶಾಸಕ ಎಂ.ವೈ.ಪಾಟೀಲ, ಅಜಯಸಿಂಗ್ ಮತ್ತಿತರರು ಅಂತಿಮ ನಮನ ಸಲ್ಲಿಸಿದರು.
ಅಂತಿಮ ದರ್ಶನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ವೈಜನಾಥ ಪಾಟೀಲ್ ಅವರು ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಅವಿರತವಾಗಿ ದುಡಿದವರು. ಈ ಭಾಗಕ್ಕೆ ಅವರ ಕೊಡುಗೆ ಅಪಾರವಾಗಿದೆ. ಅವರ ಸಾವಿನ ಸುದ್ದಿ ಆಘಾತವನ್ನುಂಟು ಮಾಡಿದೆ ಎಂದು ಸಂತಾಪ ವ್ಯಕ್ತಪಡಿಸಿದರು.