ಕಲಬುರಗಿ:ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆದ್ರೂ ಕೆಲ ಯುವಕರು ನಿಷೇಧಾಜ್ಞೆಯ ತೀವ್ರತೆ ಅರಿಯದೆ ರಸ್ತೆ ಮೇಲೆ ಓಡಾಡುತ್ತಿದ್ದಾರೆ. ಇಂಥವರನ್ನು ವಶಕ್ಕೆ ಪಡೆದು ಕೊರೊನಾ ವಿರುದ್ಧದ ಹೋರಾಟದಲ್ಲಿ ಸ್ವಯಂಸೇವಕರನ್ನಾಗಿ ಬಳಸಿಕೊಳ್ಳಲಾಗುವುದು ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಎಚ್ಚರಿಸಿದ್ದಾರೆ.
ಮಾರ್ಚ್ 19ರ ರಾತ್ರಿ 8 ಗಂಟೆಯಿಂದಲೇ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮಾರ್ಚ್ 22ರ ವರೆಗೆ ಮುಂದುವರೆಯಲಿದೆ. ಸಾರ್ವಜನಿಕರು ಈ ಸಂದರ್ಭದಲ್ಲಿ ಅಗತ್ಯ ವಸ್ತುಗಳನ್ನು ಪಡೆಯಲು ಹೊರತುಪಡಿಸಿ ಅನಾವಶ್ಯಕವಾಗಿ ಮನೆಯಿಂದ ಹೊರಬರಬಾರದು. ಈ ಮೂಲಕ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.