ಕಲಬುರಗಿ: ವಿಡಿಯೋ ಗೇಮ್ ಆಡಬೇಡ ಎಂದು ಬೈದಿದ್ದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ರಹ್ಮಪುರ ಬಡಾವಣೆಯಲ್ಲಿ ನಡೆದಿದೆ.
ವಿಡಿಯೋ ಗೇಮ್ ಆಡಬೇಡ ಎಂದಿದ್ದೇ ತಪ್ಪಾಯ್ತು... ಬಾಲಕ ನೇಣಿಗೆ ಶರಣು - ವಿಡಿಯೋ ಗೇಮ್
ವಿಡಿಯೋ ಗೇಮ್ ಆಡಬೇಡ ಎಂದು ಬೈದಿದ್ದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ನೇಣಿಗೆ ಶರಣು
ರಾಹುಲ್ ಸೊಲ್ಲಾಪುರ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಮನೆಯಲ್ಲೇ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಿನ್ನೆ ಸಂಜೆ ಮೊಬೈಲ್ನಲ್ಲಿ ವಿಡಿಯೋ ಗೇಮ್ ಆಡುತ್ತಿದ್ದ ರಾಹುಲ್ಗೆ ಆಡಬೇಡ ಎಂದು ಪೋಷಕರು ಬೈದಿದ್ದರು. ಇದೆ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ನ್ಯೂ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.