ಕಲಬುರಗಿ : ಮಹಾರಾಷ್ಟ್ರದ ಪುಣೆಯಿಂದ ಎರಡು ದಿನಗಳ ಹಿಂದಷ್ಟೇ ಗ್ರಾಮಕ್ಕೆ ಬಂದಿದ್ದ ವ್ಯಕ್ತಿಯನ್ನು ಕೊಲೆ ಮಾಡಿ ಸುಟ್ಟುಹಾಕಿರುವ ಘಟನೆ ನಗರದ ಹೊರವಲಯದ ತಾಜಸುಲ್ತಾನಪುರನಲ್ಲಿ ನಡೆದಿದೆ. ಸುಲ್ತಾನಪುರ ಗ್ರಾಮದ ನಿವಾಸಿ ಮನೋಹರ ರುದ್ರಕರ್ (35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಕಲಬುರಗಿ : ಹೋಳಿ ಹಬ್ಬಕ್ಕೆ ಊರಿಗೆ ಬಂದವನನ್ನು ಕೊಂದು ಸುಟ್ಟು ಹಾಕಿದ ಕಿರಾತಕರು - ಕಲಬುರಗಿಯಲ್ಲಿ ವ್ಯಕ್ತಿಯ ಕೊಲೆಗೈದು ಅರ್ಧಂಬರ್ಧ ಶವ ಸುಟ್ಟು ಪರಾರಿಯಾದ ಹಂತಕರು
ಕಲಬುರಗಿ ನಗರದ ಹೊರವಲಯದ ತಾಜಸುಲ್ತಾನಪುರನಲ್ಲಿ ವ್ಯಕ್ತಿಯನ್ನು ಕೊಲೆ ಮಾಡಿ ಸುಟ್ಟುಹಾಕಿರುವ ಘಟನೆ ನಡೆದಿದೆ. ಮೃತನನ್ನು ಸುಲ್ತಾನಪುರ ಗ್ರಾಮದ ನಿವಾಸಿ ಮನೋಹರ ರುದ್ರಕರ್ ಎಂದು ಗುರುತಿಸಲಾಗಿದೆ.
![ಕಲಬುರಗಿ : ಹೋಳಿ ಹಬ್ಬಕ್ಕೆ ಊರಿಗೆ ಬಂದವನನ್ನು ಕೊಂದು ಸುಟ್ಟು ಹಾಕಿದ ಕಿರಾತಕರು ಕಲಬುರಗಿಯಲ್ಲಿ ವ್ಯಕ್ತಿಯ ಕೊಲೆ](https://etvbharatimages.akamaized.net/etvbharat/prod-images/768-512-14762398-thumbnail-3x2-mdmmd.jpg)
ಕಲಬುರಗಿಯಲ್ಲಿ ವ್ಯಕ್ತಿಯ ಕೊಲೆ
ಮನೋಹರ ಪುಣೆಯಲ್ಲಿ ವಾಸವಿದ್ದನು. ಹೋಳಿ ಹಬ್ಬದ ಪ್ರಯುಕ್ತ ಎರಡು ದಿನಗಳ ಹಿಂದಷ್ಟೇ ಗ್ರಾಮಕ್ಕೆ ಆಗಮಿಸಿದ್ದ ಎನ್ನಲಾಗ್ತಿದೆ. ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಮನೆಯಿಂದ ಹೊರಹೋಗಿದ್ದ ಮನೋಹರನನ್ನು ಕೊಲೆಗೈದು ಗ್ರಾಮದಿಂದ ಕೊಂಚ ದೂರದಲ್ಲಿ ಸುಟ್ಟುಹಾಕಲಾಗಿದೆ. ದೇಹ ಅರ್ಧಂಬರ್ಧ ಸುಟ್ಟು ಕರಕಲಾಗಿದೆ. ಕೊಲೆಗೆ ಕಾರಣ ಏನು? ಹಂತಕರು ಯಾರು? ಅನ್ನೋದು ತಿಳಿದುಬಂದಿಲ್ಲ.
ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹಂತಕರ ಬಂಧನಕ್ಕೆ ಜಾಲ ಬೀಸಿದ್ದಾರೆ.