ಕರ್ನಾಟಕ

karnataka

ಕೊರೊನಾ ಮುಕ್ತ ಗ್ರಾ.ಪಂ.ಗೆ ಶಾಸಕರ ನಿಧಿಯಿಂದ 5 ಲಕ್ಷ ರೂ: ಅಪ್ಪಚ್ಚು ರಂಜನ್

By

Published : May 21, 2021, 7:52 PM IST

ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣಗಳು ಕಡಿಮೆಯಾಗುತ್ತಿದೆ. ಜೊತೆಗೆ ಸಾವಿನ ಪ್ರಮಾಣವು ಇಳಿಮುಖವಾಗುತ್ತಿದೆ. ಆದರೆ, ಇಷ್ಟಕ್ಕೆ ಸಮಾಧಾನ ಪಡದೇ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದ್ದಾರೆ.

 5 lakhs from  MLA Fund for Corona Free GP: appacchu ranjan
5 lakhs from MLA Fund for Corona Free GP: appacchu ranjan

ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತ್‍ಗಳಲ್ಲಿ ‘ಕೊರೊನಾ ಮುಕ್ತ ಗ್ರಾಮ’ ಮಾಡುವ ಗ್ರಾ.ಪಂ.ಗೆ ಶಾಸಕರ ನಿಧಿಯಡಿ 5 ಲಕ್ಷ ರೂ ನೀಡಲಾಗುವುದು ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.

ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಕೋವಿಡ್ 19 ಸೋಂಕಿತರಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣಗಳು ಕಡಿಮೆಯಾಗುತ್ತಿದೆ. ಜೊತೆಗೆ ಸಾವಿನ ಪ್ರಮಾಣವು ಇಳಿಮುಖವಾಗುತ್ತಿದೆ. ಆದರೆ, ಇಷ್ಟಕ್ಕೆ ಸಮಾಧಾನ ಪಡದೇ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೆಲವು ಸುಧಾರಣೆ ಮತ್ತು ಬದಲಾವಣೆ ಮಾಡಲಾಗಿದೆ. ತಜ್ಞ ವೈದ್ಯರು, ಶುಶ್ರೂಷಕರು, ಇತರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜಿಲ್ಲೆಯ ಹೊರಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೊಡಗು ಜಿಲ್ಲೆಯ ಹಲವು ವೈದ್ಯರು ತವರು ಜಿಲ್ಲೆಗೆ ಆಗಮಿಸಿ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕರು ತಿಳಿಸಿದರು.

ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾದ ಸೊಂಕಿತರ ಮೊಬೈಲ್ ಮತ್ತು ಹಣ ಕಳೆದಿರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಸಂಬಂಧಪಟ್ಟರು ಹೆಚ್ಚಿನ ನಿಗಾ ವಹಿಸಬೇಕಿದೆ ಎಂದು ಸೂಚಿಸಿದರು.

ABOUT THE AUTHOR

...view details