ಕರ್ನಾಟಕ

karnataka

ETV Bharat / state

ಮಡಿಕೇರಿ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಸಾವು - ಮೈಸೂರಿನ ಆಸ್ಪತ್ರೆಯಲ್ಲಿ ಯುವಕ ಸಾವು

ಬೈಕ್ ಹಾಗೂ ಜೀಪ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಯುವಕನೋರ್ವ ಮೈಸೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಗಾಯಗೊಂಡು ಆಸ್ಪತ್ರೆ ಸೇರಿದ್ದ ಯುವಕ ಸಾವು

By

Published : Sep 25, 2019, 11:41 AM IST

Updated : Sep 25, 2019, 12:31 PM IST

ಮಡಿಕೇರಿ:ಕುಟ್ಟ-ಶ್ರೀಮಂಗಲ ನಡುವಿನ ಪೂಜೆಕಲ್​ ಬಳಿ ಬೈಕ್ ಹಾಗೂ ಜೀಪ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಯುವಕ ಮೈಸೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಪೂಜೆಕಲ್​ ನಿವಾಸಿ ಗಣೇಶ್ (27) ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಯುವಕ. ಸೋಮವಾರ ಸಂಜೆ ಬೈಕ್​ನಲ್ಲಿ ಗಣೇಶ್ ಮತ್ತು ಆತನ ಸ್ನೇಹಿತ ಅಕ್ಷಯ್ ಶ್ರೀಮಂಗಲ ಕಡೆಯಿಂದ ಕುಟ್ಟ ಕಡೆಗೆ ಹೊರಟಿದ್ದರು. ಈ ವೇಳೆ ಕುರ್ಕೆ ಗ್ರಾಮದ ನಿವಾಸಿ ಸಂಜು ಎಂಬುವರ ಜೀಪ್ ಡಿಕ್ಕಿಯಿಂದ ನೆಲಕ್ಕೆ ಬಿದ್ದಿದ್ದ ಗಣೇಶನ ತಲೆ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಹಿಂಬದಿ ಕುಳಿತಿದ್ದ ಅಕ್ಷಯ್‌ಗೂ ಗಾಯಗಳಾಗಿದ್ದವು‌. ಇವರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಗಣೇಶ್​ ಮೃತಪಟ್ಟಿದ್ದಾನೆ.

ಗಾಯಗೊಂಡು ಆಸ್ಪತ್ರೆ ಸೇರಿದ್ದ ಯುವಕ ಸಾವು

ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Sep 25, 2019, 12:31 PM IST

ABOUT THE AUTHOR

...view details