ಕೊಡಗು:ಗುಂಡು ಹಾರಿಸಿಕೊಂಡು ಕಾಫಿ ಬೆಳೆಗಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದಲ್ಲಿ ನಡೆದಿದೆ.
ಕಾಫಿ ತೋಟದಲ್ಲಿ ಗುಂಡು ಹಾರಿಸಿಕೊಂಡು ಕೃಷಿಕ ಆತ್ಮಹತ್ಯೆ - farmer suicide
ಮಡಿಕೇರಿ ತಾಲೂಕಿನಲ್ಲಿ ಕಾಫಿ ಬೆಳೆಗಾರ ತಮ್ಮ ತೋಟದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
![ಕಾಫಿ ತೋಟದಲ್ಲಿ ಗುಂಡು ಹಾರಿಸಿಕೊಂಡು ಕೃಷಿಕ ಆತ್ಮಹತ್ಯೆ farmer suicide](https://etvbharatimages.akamaized.net/etvbharat/prod-images/768-512-6782627-469-6782627-1586830876275.jpg)
ಕೃಷಿಕ ಆತ್ಮಹತ್ಯೆ
ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದ ನಿವಾಸಿ ಬಿ.ಅಪ್ಪಣ್ಣ (58) ಆತ್ಮಹತ್ಯೆ ಮಾಡಿಕೊಂಡ ಕೃಷಿಕ. ಈತ ತಮ್ಮ ತೋಟದಲ್ಲಿ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.