ಕೊಡಗು: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಡ್ರ್ಯಾಗರ್ನಿಂದ ಇರಿದು ಕೊಲೆ ಮಾಡಿರುವ ಘಟನೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ರಸ್ತೆಯ ಪಂಜಾರಪೇಟೆಯಲ್ಲಿ ನಡೆದಿದೆ.
ಹಣಕಾಸಿನ ಕಲಹ: ಡ್ರ್ಯಾಗರ್ನಿಂದ ಇರಿದು ವ್ಯಕ್ತಿಯ ಕೊಲೆ - drager
ಹಣ ನೀಡದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಡ್ರ್ಯಾಗರ್ನಿಂದ ಇರಿದು ಕೊಲೆ ಮಾಡಲಾಗಿದೆ.

ಶಫೀಕ್ ಕೊಲೆಯಾದ ವ್ಯಕ್ತಿ. ಆರೋಪಿ ದರ್ಶನ್ ತಡರಾತ್ರಿ ಶಫೀಕ್ ಮನೆಗೆ ನುಗ್ಗಿ ಡ್ರ್ಯಾಗರ್ನಿಂದ ಇರಿದು ಕೊಲೆ ಮಾಡಿದ್ದಾನೆ. ಇವರಿಬ್ಬರ ನಡುವೆ ಲಕ್ಷಾಂತರ ರೂ. ಹಣಕಾಸಿನ ವ್ಯವಹಾರ ನಡೆದಿತ್ತು. ಶಫೀಕ್ ಹಣ ನೀಡದೆ ತಲೆಮರೆಸಿಕೊಂಡು ಓಡಾಡುತ್ತಿದ್ದನಂತೆ. ಹೀಗಾಗಿ ಕೊಲೆ ನಡೆದಿದೆ ಎನ್ನಲಾಗಿದೆ.
ಆರೋಪಿ ದರ್ಶನ್ನನ್ನು ವಿರಾಜಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.