ಕರ್ನಾಟಕ

karnataka

By

Published : Mar 9, 2020, 3:00 PM IST

ETV Bharat / state

ಮನೆಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಅಪರಿಚಿತನಿಂದ ಹಲ್ಲೆ

ಎಮ್ಮೆಮಾಡು ಗ್ರಾಮದ ಸಿ.ಹೆಚ್.ಮೊಯ್ದ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೋರ್ವ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ.

Assaulted person
ಹಲ್ಲೆಗೊಳಗಾದ ವ್ಯಕ್ತಿ

ಕೊಡಗು:ಮನೆಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಎಮ್ಮೆಮಾಡು ಗ್ರಾಮದ ಜಮಹತ್ ಸದಸ್ಯ ಸಿ.ಹೆಚ್.ಮೊಯ್ದ(42) ಗಂಭೀರವಾಗಿ ಹಲ್ಲೆಗೊಳಗಾದ ವ್ಯಕ್ತಿ. ರಾತ್ರಿ ಮನೆಗೆ ತೆರಳುತ್ತಿರುವ ವೇಳೆ ಏಕಾಏಕಿ ಎದುರಿಗೆ ಬಂದ ಅಪರಿಚಿತನೋರ್ವ ಹಲ್ಲೆ ನಡೆಸಿದ್ದಾನೆ ಎಂದು ಮೊಯ್ದ ತಿಳಿಸಿದ್ದಾರೆ.

ಮುಖ ಹಾಗೂ ತಲೆ ಭಾಗಕ್ಕೆ ಗಂಭೀರ ಗಾಯವಾಗಿರುವ ಮೊಯ್ದರನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ‌. ಈ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿರುವ ಅಪರಿಚಿತ ವ್ಯಕ್ತಿಯ ಪತ್ತೆಗೆ ಶೋಧ ನಡೆಸಲಾಗುತ್ತಿದೆ.

For All Latest Updates

ABOUT THE AUTHOR

...view details