ಕರ್ನಾಟಕ

karnataka

ETV Bharat / state

ನೆರೆ ಪರಿಹಾರ ಅನುದಾನ ಬೇರೆ ರಾಜ್ಯಗಳಿಗಿಂತ ಕರ್ನಾಟಕಕ್ಕೇ ಹೆಚ್ಚು ಸಿಕ್ಕಿದೆ: ಪ್ರತಾಪ್​ ಸಿಂಹ

ನೆರೆ ಪರಿಹಾರ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕಕ್ಕೆ ಹೆಚ್ಚಿನ ಅನುದಾನವನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ರು.

By

Published : Jan 8, 2020, 8:50 PM IST

MP Pratap simha
ಸಂಸದ ಪ್ರತಾಪ್ ಸಿಂಹ

ಮಡಿಕೇರಿ(ಕೊಡಗು):ನೆರೆ ಪರಿಹಾರವಾಗಿ ಬೇರೆ ರಾಜ್ಯಗಳಿಗಿಂತ ಕರ್ನಾಟಕಕ್ಕೆ ಹೆಚ್ಚಿನ ಅನುದಾನವನ್ನು ಕೇಂದ್ರ ಸರ್ಕಾರ ನೀಡಿದೆ. ಆದರೆ, ಕಾಂಗ್ರೆಸ್ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದಿದ್ದ ಕಾಂಗ್ರೆಸ್ ಸರ್ಕಾರ 10 ವರ್ಷಗಳಲ್ಲಿ ಎಷ್ಟು ಅನುದಾನ ನೀಡಿತ್ತೊ ಅದಕ್ಕಿಂತ ಮೂರು ಪಾಲು ಹೆಚ್ಚಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನೀಡಿದೆ ಎಂದು ಹೆಚ್ಚಿನ ಅನುದಾನ ಕೊಟ್ಟಿಲ್ಲ ಎನ್ನುವ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ್ರು.

ಕೇಂದ್ರದಿಂದ ಕರ್ನಾಟಕಕ್ಕೆ ಹೆಚ್ಚಿನ ನೆರೆ ಪರಿಹಾರ ಸಿಕ್ಕಿದೆ: ಸಂಸದ ಪ್ರತಾಪ್ ಸಿಂಹ

ದೇಶದಲ್ಲಿ ಸಾಕಷ್ಟು ವಿಶ್ವವಿದ್ಯಾಲಯಗಳು ಇವೆ. ಜೆಎನ್‌ಯು, ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯಗಳು ಮಾತ್ರ ಇಲ್ಲ. ಅಲ್ಲಿಯ ವಿದ್ಯಾರ್ಥಿಗಳು ಬಂದು ಬೊಬ್ಬೆ ಹೊಡೆದರೆ, ಎಲ್ಲಾ ವಿದ್ಯಾರ್ಥಿಗಳು ಬೀದಿಗೆ ಬರಲ್ಲ. ಆ ರೀತಿ ಬಿಂಬಿಸುವ ಕೆಲಸವನ್ನು ಕೆಲವರು ಮಾಡಿಸುತ್ತಿದ್ದಾರೆ ಎಂದು ಸಂಸದರು ಆರೋಪಿಸಿದರು.

ಪೌರತ್ವ (ತಿದ್ದುಪಡಿ) ಕಾಯ್ದೆ ಪರವಾದ ರ್ಯಾಲಿಗಳಿಗೆ ಸಾವಿರಾರು ಜನ ಬರುತ್ತಿದ್ದಾರೆ. ದೇಶಕ್ಕೆ ಕೆಟ್ಟ ಹೆಸರು ತರಲು ಕೆಲವರು ನಕಾರಾತ್ಮಕವಾಗಿ ಪ್ರಚಾರ ಮಾಡುತ್ತಿದ್ದಾರೆ. ಮಡಿಕೇರಿಯಲ್ಲಿ ಬಸ್‌ಗೆ ಕಲ್ಲು ತೂರಿದರೆ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವವರಿಗೆ ನೋಟಿಸ್ ನೀಡಬೇಕು. ಅವರಿಂದಲೇ ನಷ್ಟವನ್ನು ವಸೂಲಿ ಮಾಡಲಿ ಎಂದು ಪೊಲೀಸರಿಗೆ ಸಂಸದ ಪ್ರತಾಪ್​ ಸಿಂಹ ಮನವಿ ಮಾಡಿದ್ರು.

ABOUT THE AUTHOR

...view details