ಕರ್ನಾಟಕ

karnataka

ETV Bharat / state

ಅಕ್ರಮ ಕಡವೆ ಬೇಟೆ ಪ್ರಕರಣ: ಆರೋಪಿಯ ಬಂಧನ - ಕಡವೆ ಬೇಟೆ ಪ್ರಕರಣ ಆರೋಪಿ ಬಂಧನ

ಭಾಗಮಂಡಲ ವಲಯದ ಕರಿಕೆ ಉಪ ವಲಯ ವ್ಯಾಪ್ತಿಯಲ್ಲಿ ನಡೆದ ಅಕ್ರಮ ಕಡವೆ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಆರೋಪಿಯ ಬಂಧನ

By

Published : Nov 3, 2019, 4:51 PM IST

ಕೊಡಗು: ಭಾಗಮಂಡಲ ವಲಯದ ಕರಿಕೆ ಉಪ ವಲಯ ವ್ಯಾಪ್ತಿಯಲ್ಲಿ ನಡೆದ ಅಕ್ರಮ ಕಡವೆ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಕಡವೆ ಬೇಟೆ ಪ್ರಕರಣದ ಆರೋಪಿ

ಕರಿಕೆ ಗ್ರಾಮದ ಎಳ್ಳುಕೊಚ್ಚಿ ಮಡೆಕಾನ ನಿವಾಸಿ ರಾಘವ ಬಂಧಿತ ಆರೋಪಿ.

ಬೇಟೆಯಾಡಿ ಕಡವೆ ಮಾಂಸವನ್ನು ಕೇರಳ ಮೂಲದ ವ್ಯಕ್ತಿಗಳಿಗೆ ಮಾರಾಟ ಮಾಡಿದ ಖಚಿತ ಮಾಹಿತಿಗೆ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿ ಮೊಕದ್ದಮೆ ದಾಖಲಿಸಿದ್ದಾರೆ.

ಆರೋಪಿಯಿಂದ ಕಡವೆ ತಲೆ, ಚರ್ಮ, ಕಾಲುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕೇಬಲ್ ವಯರ್ ಹಾಗು ಕತ್ತಿಯನ್ನು ವಶಪಡಿಸಿಕೊಂಡಿದ್ದಾರೆ. ನೆರೆಯ ಕೇರಳ ರಾಜ್ಯಕ್ಕೆ ಅಕ್ರಮವಾಗಿ ಬೇಟೆಯಾಗಿ ಮಾಂಸ ಪೂರೈಸುವುದೇ ಈತನ ದಂಧೆಯಾಗಿತ್ತು ಎನ್ನಲಾಗಿದೆ.

ABOUT THE AUTHOR

...view details