ವಿರಾಜಪೇಟೆ (ಕೊಡಗು) : ಪ್ರೀತಿಯ ನಾಟಕವಾಡಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ವಿರಾಜಪೇಟೆ ನಗರ ಪೊಲೀಸರು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
ವಿರಾಜಪೇಟೆ ನಗರದ ಅಯ್ಯಪ್ಪ ಬೆಟ್ಟದ ನಿವಾಸಿ ಶಿವಕುಮಾರ್ ಆಲಿಯಾಸ್ ಶಿವರಾಜ್ (24) ಬಂಧಿತ ಆರೋಪಿ. ವೃತ್ತಿಯಲ್ಲಿ ಪೈಂಟರ್ ಆಗಿರುವ ಈತ, ಕುಶಾಲನಗರದ ಆಸುಪಾಸಿನಲ್ಲಿ ಕೆಲಸ ಮಾಡುತ್ತಿರಬೇಕಾದರೆ ಅಪ್ರಾಪ್ತೆಯೊಬ್ಬಳ ಪರಿಚಯವಾಗಿದೆ. ಈ ಪರಿಚಯ ಪ್ರೀತಿಗೆ ತಿರುಗಿ, ಆರೋಪಿ ಶಿವಕುಮಾರ್ ಬಾಲಕಿಗೆ ಉಡುಗೊರೆಗಳನ್ನು ನೀಡಿ ತನ್ನ ಮೇಲೆ ನಂಬಿಕೆ ಬರುವಂತೆ ಮಾಡಿದ್ದಾನೆ. ಈತ ಮೋಸ ಮಾಡುತ್ತಿದ್ದಾನೆ ಎಂದು ಅರಿವಾದಾಗ, ಪ್ರೀತಿಗೆ ಇತಿಶ್ರಿ ಹೇಳಿ ಆತ ನೀಡಿದ್ದ ಉಡುಗೊರೆಗಳನ್ನು ಹಿಂದಿರುಗಿಸಲು ಜುಲೈ 31 ರಂದು ಬಾಲಕಿ ಆತನ ಮನೆಗೆ ಹೋಗಿದ್ದಳು. ಈ ವೇಳೆ ಆಕೆಯ ಮೇಲೆ ಅತ್ಯಾಚಾರವೆಸಗಿದ ಶಿವಕುಮಾರ್, ಮೊಬೈಲ್ನಲ್ಲಿ ಚಿತ್ರೀಕರಿಸಿ ಸ್ನೇಹಿತನಿಗೆ ವಿಡಿಯೋ ರವಾನಿಸಿದ್ದ.