ಕರ್ನಾಟಕ

karnataka

ETV Bharat / state

ತರಕಾರಿ ಜೊತೆ ಅಕ್ರಮ ಗೋಮಾಂಸ ಮಾರಾಟ: ಆರೋಪಿ ಬಂಧನ - ಕೊಡಗು ಅಪರಾಧ ಸುದ್ದಿ

ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಕೊಡಗಿನ ವಿರಾಜಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ.

Man arreste in Kodagu for selling Beef illegally
ಆರೋಪಿ ಬಂಧನ

By

Published : Jun 15, 2020, 9:55 PM IST

ವಿರಾಜಪೇಟೆ/ಕೊಡಗು: ತರಕಾರಿ ಜೊತೆಗೆ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿರಾಜಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ಬಂಧಿಸಲಾಗಿದೆ.

ಸೋಮಶೇಖರ್ ಎಂಬಾತ ತರಕಾರಿ ಜೊತೆಗೆ ಗೋಮಾಂಸ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದ ಆರೋಪಿ. ಈತ ಕೆ.ಆರ್.ನಗರದಿಂದ ಅಕ್ರಮವಾಗಿ ಗೋಮಾಂಸ ತಂದು, ತರಕಾರಿ ಜೊತೆಗೆ‌ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿ ಸಿಕ್ಕಿಬಿದ್ದ ತಕ್ಷಣ ಮತ್ತೊಬ್ಬ ಆರೋಪಿ ಬಷೀರ್ ಸ್ಥಳದಿಂದ ಪರಾರಿಯಾಗಿದ್ದಾನೆ.

ಆರೋಪಿ ಬಂಧನ

ಶ್ರೀಮಂಗಲ ಪೊಲೀಸರು ವಾಹನ ಸಹಿತ ಮಾಂಸ ಜಪ್ತಿ ಮಾಡಿದ್ದಾರೆ. ಈ ಸಂಬಂಧ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details