ಮಡಿಕೇರಿ: ಪೊಲೀಸರ ಜೊತೆ ನಡೆದಿದ್ದ ಗಲಾಟೆಯಲ್ಲಿ ಪೊಲೀಸರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾನಸಿಕ ಅಸ್ವಸ್ಥ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತನ ಕುಟುಂಬಸ್ಥರು ಪೊಲೀಸರ ಹಲ್ಲೆಯಿಂದಲೇ ಸಾವನ್ನಪ್ಪಿರುವುದಾಗಿ ವಿರಾಜಪೇಟೆ ಪೊಲೀಸರ ವಿರುದ್ಧ ಆರೋಪ ಮಾಡುತ್ತಿದ್ದಾರೆ.
ರಾಯ್ ಡಿಸೋಜಾ ಸಾವನ್ನಪ್ಪಿದ ವ್ಯಕ್ತಿ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಚಿಕ್ಕಪೇಟೆ ಎಂಬಲ್ಲಿ ಜೂ.9ರ ಮಧ್ಯರಾತ್ರಿ ಮನೆಯಿಂದ ಹೊರಟಿದ್ದ ರಾಯ್ ಡಿಸೋಜಾ ಮಚ್ಚು ಹಿಡಿದು ವಿರಾಜಪೇಟೆ ಪಟ್ಟಣದಲ್ಲಿ ಅಲೆದಾಡುತ್ತಿದ್ದ ಎನ್ನಲಾಗಿದೆ. ಇದನ್ನ ಕಂಡ ಪೊಲೀಸರು ಆತನ್ನ ವಿಚಾರಿಸಲು ಮುಂದಾಗಿದ್ದಾರೆ. ಆದರೆ ಆತ ಪೊಲೀಸರ ಮೇಲೂ ಮಚ್ಚು ಬೀಸಲು ಮುಂದಾಗಿದ್ದಾನೆ ಎನ್ನಲಾಗಿದೆ. ಹಲ್ಲೆಗೆ ಪ್ರತಿಯಾಗಿ ಪೊಲೀಸರಿಂದ ಕೂಡ ಮರು ದಾಳಿಯನ್ನ ನಡೆಸಿದ್ದಾರೆ. ನಂತರ ಘಟನೆಯಲ್ಲಿ ಗಾಯಗೊಂಡ ರಾಯ್ ಡಿಸೋಜಾರನ್ನು ಮಡಿಕೇರಿಯ ಅಶ್ವಿನಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.