ಕರ್ನಾಟಕ

karnataka

By

Published : Jul 11, 2019, 5:38 PM IST

ETV Bharat / state

ಮಡಿಕೇರಿಯಲ್ಲಿ ತುರ್ತು ಚಿಕಿತ್ಸಾ ಆಸ್ಪತ್ರೆ ತೆರೆಯುವಂತೆ ಕೇಂದ್ರ ಸಚಿವರಿಗೆ ಮನವಿ

ಮಡಿಕೇರಿಯಲ್ಲಿ ಅತ್ಯಾಧುನಿಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ತೆರಯುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿತ್ತು. ಈ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

pratap simha

ಕೊಡಗು:ಮಡಿಕೇರಿಯಲ್ಲಿ ಎಮರ್ಜೆನ್ಸಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ತೆರೆಯುವಂತೆ ಕೇಂದ್ರ ಸಚಿವರಿಗೆ ಸಂಸದ ಪ್ರತಾಪ್ ಸಿಂಹ ಮನವಿ ಸಲ್ಲಿಸಿದ್ದಾರೆ.

ಮೈಸೂರು-ಕೊಡಗು ಮಡಿಕೇರಿಯಲ್ಲಿ ಅತ್ಯಾಧುನಿಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ತೆರಯುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿತ್ತು. ಸಂಸದ ಪ್ರತಾಪ್ ಸಿಂಹ ಅವರಿಗೆ ಮಡಿಕೇರಿಯ ಜನರು ಹಾಗೂ ಸಿನಿಮಾ ನಟ-ನಟಿಯರು ಮನವಿ ಸಲ್ಲಿಸಿದ್ದರು.‌

ಈ ಹಿನ್ನೆಲೆಯಲ್ಲಿ ಲೋಕಸಭಾ ಅಧಿವೇಶನದಲ್ಲಿ ಭಾಗವಹಿಸಿರುವ ಸಂಸದ ಪ್ರತಾಪ್ ಸಿಂಹ, ಕೇಂದ್ರ ಸಚಿವರಾದ ಸದಾನಂದ ಗೌಡ, ಸಚಿವ ಪಿಯೂಷ್ ಗೋಯಲ್ ಹಾಗೂ ಸಂಸದರಾದ ತೇಜಸ್ವಿ ಸೂರ್ಯ, ಸ್ಥಳೀಯ ಶಾಸಕ ಅಪ್ಪಚ್ಚು ರಂಜನ್ ಅವರೊಂದಿಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರನ್ನು ಭೇಟಿಯಾಗಿ ಶೀಘ್ರವೇ ಮಡಿಕೇರಿಯಲ್ಲಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ತೆರೆಯುವಂತೆ ಮನವಿ ಸಲ್ಲಿಸಿದರು.

ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು ಶೀಘ್ರವೇ ಅನುಮೋದನೆ ನೀಡುವುದಾಗಿ ಭರವಸೆ ನೀಡಿದರು ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.

ABOUT THE AUTHOR

...view details