ಕರ್ನಾಟಕ

karnataka

ETV Bharat / state

ಎನ್‌ಆರ್‌ಸಿ, ಸಿಎಎ ಖಂಡಿಸಿ ಕೊಡಗಿನಲ್ಲಿ‌ ಸಿಪಿಐಎಂ ಪ್ರತಿಭಟನೆ - ಸಿಪಿಐಎಂ ಪಕ್ಷ ಕೊಡಗಿನಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್​ಆರ್​​ಸಿ) ವಿರೋಧಿಸಿ ಸಿಪಿಐಎಂ ಪಕ್ಷ ಕೊಡಗಿನಲ್ಲಿ ಪ್ರತಿಭಟನೆ ನಡೆಸಿತು.

Protest against CAA
ಪ್ರತಿಭಟನಾನಿರತ ಕಾರ್ಯಕರ್ತರು

By

Published : Jan 3, 2020, 12:42 PM IST

ಕೊಡಗು: ಎನ್‌ಆರ್‌ಸಿ ಮತ್ತು ಸಿಎಎ ಕಾಯ್ದೆಗಳನ್ನು ವಿರೋಧಿಸಿ ಸಿಪಿಐಎಂ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದ್ದು ಜಾರಿಗೆ ತಂದಿರುವ ಎನ್‌ಆರ್‌ಸಿ, ಸಿಎಎ ಜನ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಪ್ರತಿಭಟನೆ

ಈ ಕಾಯ್ದೆಗಳನ್ನು ಜಾರಿಗೊಳಿಸದೆ ಜನರ ಹಿತ ಕಾಪಾಡಬೇಕು ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ABOUT THE AUTHOR

...view details