ಕರ್ನಾಟಕ

karnataka

By

Published : Sep 27, 2019, 10:12 PM IST

ETV Bharat / state

ಕೊಡಗಿನಲ್ಲಿ ಗುಂಡಿಕ್ಕಿಕೊಂಡು ವ್ಯಾಪಾರಿ ಆತ್ಮಹತ್ಯೆ !

ಹುದಿಕೇರಿ ಗ್ರಾಮದ ಅಚ್ಚಿಯಂಡ ಸುನೀಲ್ (45) ಎಂಬ ಕಾಫಿ ವ್ಯಾಪಾರಿಯೊಬ್ಬ ತನ್ನ ಮಳಿಗೆಯಲ್ಲಿ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು ನಿಖರ ಕಾರಣ ತಿಳಿದುಬಂದಿಲ್ಲ.

ಗುಂಡಿಕ್ಕಿಕೊಂಡು ವ್ಯಾಪಾರಿ ಆತ್ಮಹತ್ಯೆ !

ಕೊಡಗು:ಕಾಫಿ ವ್ಯಾಪಾರಿಯೊಬ್ಬ ತನ್ನ ಮಳಿಗೆಯಲ್ಲಿ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುದಿಕೇರಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಅಚ್ಚಿಯಂಡ ಸುನೀಲ್ (45) ಎಂಬಾತ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಹುದಿಕೇರಿಯ ಮಹಾದೇವ ದೇವಾಲಯ ಮುಂಭಾಗದ ಮಳಿಗೆಯಲ್ಲಿ ರಿವಾಲ್ವರ್​ನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕಳೆದ 20 ವರ್ಷಗಳಿಂದ ವ್ಯಾಪಾರದಲ್ಲಿ ತೊಡಗಿಕೊಂಡಿದ್ದು ಸಮಾಜ ಸೇವೆಯಲ್ಲೂ ಸಕ್ರಿಯರಾಗಿದ್ದರು. ಇನ್ನೂ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ಸದ್ಯ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details