ಕರ್ನಾಟಕ

karnataka

ETV Bharat / state

ಕೊಡಗಿನಲ್ಲಿ ಮುಂದುವರೆದ ಹುಲಿ ದಾಳಿ: ಆತಂಕದಲ್ಲಿ ಸ್ಥಳೀಯರು

ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿರುವ ಘಟನೆ ವಿರಾಜಪೇಟೆ ತಾಲೂಕಿನ ದೇವನೂರು ಗ್ರಾಮದಲ್ಲಿ ನಡೆದಿದೆ.

By

Published : Nov 23, 2019, 10:50 AM IST

ಹುಲಿ ದಾಳಿಗೆ ಬಲಿಯಾದ ಹಸು

ಕೊಡಗು: ಕೊಡಗಿನಲ್ಲಿ ಹುಲಿ ದಾಳಿ ಮುಂದುವರೆದಿದ್ದು, ನಿನ್ನೆ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ದಾಳಿ ನಡೆಸಿರುವ ಘಟನೆ ವಿರಾಜಪೇಟೆ ತಾಲೂಕಿನ ದೇವನೂರು ಗ್ರಾಮದಲ್ಲಿ ನಡೆದಿದೆ.

ದೇವನೂರಿನ ಪೋಡಮಡ ಸ್ವಾತಿ ಕುಟ್ಟಯ್ಯ ಎಂಬುವವರಿಗೆ ಸೇರಿದ ಹಸು ಹುಲಿ ದಾಳಿಗೆ ಬಲಿಯಾಗಿದೆ. ತಡರಾತ್ರಿ ಕೊಟ್ಟಿಗೆಯಲ್ಲಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕಾಲ್ಕಿತ್ತಿದೆ. ವಿರಾಜಪೇಟೆ ತಾಲೂಕಿನ ಸುತ್ತಮುತ್ತ ಹುಲಿ ದಾಳಿ ವಿಪರೀತವಾಗಿದ್ದು, 4 ದಿನಗಳ ಹಿಂದಷ್ಟೆ 2 ಹಸುಗಳ ಮೇಲೆ ದಾಳಿ ನಡೆದಿತ್ತು. ಇದರಿಂದ ಈ ವ್ಯಾಪ್ತಿಯ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು, ಕೂಡಲೇ ಹುಲಿಗಳನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.ಈ ಸಂಬಂಧ ಬಾಳೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details