ಕೊಡಗು:ಜಿಲ್ಲೆಯಲ್ಲಿ 2018ರಲ್ಲಿ ಸಂಭವಿಸಿದ್ದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಯ ರೀ ಬಿಲ್ಡ್ ಕೊಡಗು ಯೋಜನೆ ಮೂಲಕ 25 ಮನೆಗಳನ್ನು ಹಸ್ತಾಂತರಿಸಲಾಯಿತು.
ಇದುವರೆಗೆ ರೋಟರಿ ಸಂಸ್ಥೆ ವತಿಯಿಂದ 50 ಮನೆಗಳನ್ನು ಸಂತ್ರಸ್ತರಿಗೆ ನೀಡಲಾಗಿದೆ. ಕಳೆದ ವರ್ಷ ಜೂನ್ನಲ್ಲಿ ಪ್ರಥಮ ಹಂತವಾಗಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮಾದಾಪುರ ಬಳಿಯ ಇಗ್ಗೋಡ್ಲು ಗ್ರಾಮದಲ್ಲಿ 25 ಮನೆಗಳನ್ನು ನೀಡಲಾಗಿತ್ತು. ಇದೀಗ ಮಾದಾಪುರ, ಗರಗಂದೂರು ವ್ಯಾಪ್ತಿಯ 25 ಮಂದಿಗೆ ಅವರ ಜಾಗದಲ್ಲಿಯೇ ಹೊಸ ಮನೆ ನಿರ್ಮಾಣ ಮಾಡಿ ಭಾನುವಾರ ಸರಳ ರೀತಿಯಲ್ಲಿ ಹಸ್ತಾಂತರಿಸಲಾಯಿತು ಎಂದು ರೀ ಬಿಲ್ಡ್ ಯೋಜನಾ ಸಮಿತಿ ಅಧ್ಯಕ್ಷ ಡಾ. ರವಿ ಅಪ್ಪಾಜಿ ತಿಳಿಸಿದ್ದಾರೆ.