ಕರ್ನಾಟಕ

karnataka

By

Published : Jan 4, 2020, 1:15 PM IST

ETV Bharat / state

ಕನ್ನಡಿಗರ ಬಗ್ಗೆ ರಮೇಶ್​​​​ ಜಾರಕಿಹೋಳಿ ಹಾಗೆ ಹೇಳಲು ಸಾಧ್ಯವಿಲ್ಲ: ಸಚಿವ ಸೋಮಣ್ಣ

ಶಾಸಕ ರಮೇಶ್ ಜಾರಕಿಹೊಳಿ ಕೂಡ ಕನ್ನಡಿಗರೇ. ಅವರು ಹಾಗೆ ಹೇಳಿರಲು ಸಾಧ್ಯವಿಲ್ಲ. ಅವರ ಜೊತೆ ಒಮ್ಮೆ ಮಾತನಾಡಿ ಹೇಳುತ್ತೇನೆ ಎಂದು ಬೆಳಗಾವಿ ಗ್ರಾಮಾಂತರ ಮರಾಠಿಗರ ಸ್ವತ್ತು ಎಂಬ ರಮೇಶ್​​​ ಜಾರಕಿಹೊಳಿ ಹೇಳಿಕೆಗೆ ಸಚಿವ ಸೋಮಣ್ಣ ಪ್ರತಿಕ್ರಿಯೆ ನೀಡಿದರು.

v-somann
ಸಚಿವ ಸೋಮಣ್ಣ

ಕೊಡಗು:ಶಾಸಕ ರಮೇಶ್ ಜಾರಕಿಹೊಳಿ ಕೂಡ ಕನ್ನಡಿಗರೇ. ಅವರು ಹಾಗೆ ಹೇಳಿರಲು ಸಾಧ್ಯವಿಲ್ಲ. ಅವರ ಜೊತೆ ಒಮ್ಮೆ ಮಾತನಾಡಿ ಹೇಳುತ್ತೇನೆ ಎಂದು ಬೆಳಗಾವಿ ಗ್ರಾಮಾಂತರ ಮರಾಠಿಗರ ಸ್ವತ್ತು ಎಂಬ ರಮೇಶ್​​​ ಜಾರಕಿಹೊಳಿ ಹೇಳಿಕೆಗೆ ಸಚಿವ ಸೋಮಣ್ಣ ಪ್ರತಿಕ್ರಿಯೆ ನೀಡಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಕಳೆದ ಬಾರಿ ಪ್ರಕೃತಿ ವಿಕೋಪದ ನಿರಾಶ್ರಿತರಿಗೆ ಸರ್ಕಾರ ನಿರ್ಮಿಸುತ್ತಿರುವ ಮನೆಗಳನ್ನು ಹಸ್ತಾಂತರಿಸಲು ಜಿಲ್ಲಾ ಮಟ್ಟದಲ್ಲಿ ಸ್ಥಳೀಯ ಶಾಸಕರ ನೇತೃತ್ವದಲ್ಲಿ ನಾವೂ ಪ್ರಾಮಾಣಿಕ ಕೆಲಸ ಮಾಡುತ್ತಿದ್ದೇವೆ‌. ಈಗಾಗಲೇ ಸಾಕಷ್ಟು ಮನೆಗಳನ್ನು ಕಟ್ಟುತ್ತಿದ್ದೇವೆ. ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದ ಸಾಕಷ್ಟು ಹಾನಿಯಾಗಿದ್ದು, ಮುಂದಿನ ದಿನಗಳಲ್ಲಿ ಹಾಗೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದರು.

ಸಚಿವ ಸೋಮಣ್ಣ

ಜಿಲ್ಲೆಯಲ್ಲಿ 161 ಸರ್ಕಾರಿ ಶಾಲೆಗಳು ಶಿಥಿಲಾವಸ್ಥೆಯಲ್ಲಿವೆ ಎನ್ನುವುದಕ್ಕೆ ಅದರ ಬಗ್ಗೆ ಸ್ಪಷ್ಟ ಮಾಹಿತಿ ನನಗಿಲ್ಲ. ಸರ್ಕಾರ ಸಂಪುಟದಲ್ಲಿ 500 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಈಗಾಗಲೇ 200 ಕೋಟಿ ರೂ. ಹಣವನ್ನು ಶಿಕ್ಷಣ ಇಲಾಖೆಗೆ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ABOUT THE AUTHOR

...view details