ಕರ್ನಾಟಕ

karnataka

ETV Bharat / state

ಕಾಂಗ್ರೆಸ್​ ಶಾಸಕ ಪ್ರಾಣ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಎಸ್ಪಿಗೆ ದೂರು ನೀಡಿದ ಸಮಾಜ ಸೇವಕ..

ಬಂಗಾರಪೇಟೆ ಕಾಂಗ್ರೆಸ್​ ಶಾಸಕ ನಾರಾಯಣಸ್ವಾಮಿ, ಸಮಾಜ ಸೇವಕ ಶ್ರೀಧರ್ ಎಂಬುವವರಿಗೆ ಅವರ ಸಹಚರರಿಂದ ಪ್ರಾಣ ಬೆದರಿಕೆ ಹಾಕಿಸಿರುವುದಾಗಿ ಆರೋಪಿಸಿದ ಶ್ರೀಧರ್ ತಮಗೆ ರಕ್ಷಣೆ ಕೊಡುವಂತೆ ಕೋರಿ ಎಸ್ಪಿ ಅವರಿಗೆ ದೂರು ನೀಡಿದ್ದಾರೆ. ​

By

Published : Oct 8, 2022, 4:15 PM IST

KN_KLR_M
​ ಶಾಸಕ ಎಸ್.ಎನ್.ನಾರಾಯಣಸ್ವಾಮಿ

ಕೋಲಾರ: ಅಂಬೇಡ್ಕರ್ ಭವನ ನಿರ್ಮಾಣ ವಿಚಾರವಾಗಿ ಸಮಾಜ ಸೇವಕನಿಗೆ ಬಂಗಾರಪೇಟೆ ಶಾಸಕ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಎಸ್ಪಿ ಅವರಿಗೆ ದೂರು ನೀಡಲಾಗಿದೆ.

ಬಂಗಾರಪೇಟೆ ಕಾಂಗ್ರೆಸ್​ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಸಮಾಜ ಸೇವಕ ಶ್ರೀಧರ್ ಎಂಬುವವರಿಗೆ ಅವರ ಸಹಚರರಿಂದ ಪ್ರಾಣ ಬೆದರಿಕೆ ಹಾಕಿರುವುದಾಗಿ ಆರೋಪಿಸಿ, ನನ್ನ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಕೋರಿ,‌ ಕೆಜಿಎಫ್ ಎಸ್ಪಿ ಧರಣಿ ದೇವಿ ಅವರಿಗೆ ಶ್ರೀಧರ್​ ದೂರು ಸಲ್ಲಿಸಿದ್ದಾರೆ.

ಬಂಗಾರಪೇಟೆ ಪಟ್ಟಣದ ಒಬ್ಬಟ್ಟು ಕೆರೆಯಲ್ಲಿ ಅಕ್ರಮವಾಗಿ ಅಂಬೇಡ್ಕರ್ ಭವನ ನಿರ್ಮಾಣ ಮಾಡುತ್ತಿದ್ದಾರೆಂದು ಆರೋಪಿಸಿ, ಸಮಾಜ ಸೇವಕ ಶ್ರೀಧರ್ ನ್ಯಾಯಾಲಯದಲ್ಲಿ ಧಾವೆ ಹೂಡಿದ್ರು. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಮಧ್ಯಂತರ ತಡೆಯಾಜ್ಞೆ ತರಲಾಗಿತ್ತು.

ಅಲ್ಲದೇ ಒಬ್ಬಟ್ಟು ಕೆರೆ ಪ್ರದೇಶದಲ್ಲಿ ಅನಧಿಕೃತವಾಗಿ 2 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮುಂದಾಗಿದ್ದು, ಅಲ್ಲಿನ ಒತ್ತುವರಿಯನ್ನು ಸಂಪೂರ್ಣವಾಗಿ ತೆರವುಗೊಳಿಸಲು ಜಿಲ್ಲಾಧಿಕಾರಿಗಳಿಗೆ ನ್ಯಾಯಾಲಯ ಸೂಚನೆ ನೀಡಿತ್ತು. ಇದಾದ ಬಳಿಕ ಶಾಸಕರ ಸಹಚರರು, ಶ್ರೀಧರ್​ಗೆ ಬೆದರಿಕೆ ಹಾಕಿ ಮನೆ ಮುಂದೆ ಧರಣಿ ಮಾಡುವುದಾಗಿ ಹೇಳಿದ್ದಾರೆ.

ಅಲ್ಲದೇ ಅ.19ರೊಳಗೆ ಪ್ರಕರಣ ಇತ್ಯರ್ಥವಾಗದಿದ್ದಲ್ಲಿ ಬಂಗಾರಪೇಟೆ ಬಂದ್ ಮಾಡುವ ಧಮಕಿ ಹಾಕಿದ್ದು, ನನಗೆ ನನ್ನ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಶ್ರೀಧರ್​ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಆರ್​ಎಸ್​​ಎಸ್ ಮುಖಂಡನ ಕಾರಿನ ಮೇಲೆ ಜಿಹಾದ್ ಎಂದು ಬರೆದು ಕೊಲೆ ಬೆದರಿಕೆ

ABOUT THE AUTHOR

...view details