ಕರ್ನಾಟಕ

karnataka

ETV Bharat / state

ಮಳೆ-ಗಾಳಿಗೆ ಬೆಳೆ ನಾಶ; ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ ಕೋಲಾರದ ರೈತರು - ಕೊರೊನಾ ಲಾಕ್‍ಡೌನ್‍ ರಿಲೀಫ್‍

ಕೊರೊನಾ ಲಾಕ್‍ಡೌನ್‍ ರಿಲೀಫ್‍ನಿಂದಾಗಿ ನಿಟ್ಟುಸಿರು ಬಿಡುವಷ್ಟರಲ್ಲೇ, ಕಷ್ಟಪಟ್ಟು ಬೆಳೆದ ಬೆಳೆ ಸಂಪೂರ್ಣ ನೆಲಕಚ್ಚಿದ್ದು ಕೋಲಾರ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

agriculture-crop-formers-loss-in-acres-kolar
ಮಳೆ-ಗಾಳಿಗೆ ಫಸಲಿಗೆ ಬಂದಿದ್ದ ಬೆಳೆ ನಾಶ, ಸರಕಾರದ ನೆರವಿನ ನಿರೀಕ್ಷೆಯಲ್ಲಿ ಕೋಲಾರ ರೈತರು

By

Published : May 30, 2020, 5:31 PM IST

ಕೋಲಾರ: ಕಳೆದ ಮೂರು ದಿನಗಳಿಂದ ಜಿಲ್ಲೆಯ ಹಲವೆಡೆ ಬೀಳುತ್ತಿರುವ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ, ಲಕ್ಷಾಂತರ ರೂ. ಬೆಳೆ ಹಾನಿಯಾಗಿದೆ. ಬಿರುಗಾಳಿ ಸಹಿತ ಮಳೆಗೆ ನೆಲಕ್ಕೆ ಬಿದ್ದಿರುವ ಟೊಮ್ಯಾಟೊ, ಬಾಳೆ ಹಾಗೂ ಮಾವು ಹಾಳಾಗಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಶ್ರೀನಿವಾಸಪುರ, ಬಂಗಾರಪೇಟೆ ತಾಲೂಕುಗಳ ಹಲವೆಡೆ ಗುಡುಗು ಸಹಿತ ಬಿರುಗಾಳಿ ಮಳೆಯಾಗಿ ನೂರಾರು ಎಕರೆ ತೋಟಗಾರಿಕೆ ಬೆಳೆಗಳು ನೆಲಕಚ್ಚಿವೆ. ಅದರಲ್ಲೂ ಶ್ರೀನಿವಾಸಪುರದ ಕೆಲವು ಗ್ರಾಮಗಳಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಲಕ್ಷಾಂತರ ರೂ. ಮಾವು ನೆಲಕ್ಕುದುರಿದೆ. ಇನ್ನೇನು ಫಸಲು ಕೊಯ್ದು ಲಾಭದ ನಿರೀಕ್ಷೆಯಲ್ಲಿ ಬೆಳೆದಿದ್ದ ಬೆಳೆ ಮಣ್ಣು ಪಾಲಾಗಿರುವುದು ರೈತರು ಕಂಗಾಲಾಗುವಂತೆ ಮಾಡಿದೆ.

ಮಳೆ-ಗಾಳಿಗೆ ಬೆಳೆ ನಾಶ

ಇನ್ನು ಮಳೆಗಿಂತ ಹೆಚ್ಚಾಗಿ ಆಲಿಕಲ್ಲು ಹಾಗೂ ಬಿರುಗಾಳಿಯ ಅಬ್ಬರಕ್ಕೆ ಲಕ್ಷಾಂತರ ರೂ. ಬಾಳೆ ನೆಲಕ್ಕುರುಳಿದೆ. ಈ ಬರಗಾಲದಲ್ಲಿ ಇದ್ದ ಸಲ್ಪಸ್ವಲ್ಪ ನೀರಿನಲ್ಲೇ ಲಕ್ಷಾಂತರ ರೂ. ಬಂಡವಾಳ ಹಾಕಿ, ಒಳ್ಳೆಯ ಬೆಳೆ ಬೆಳೆದು ಲಾಭದ ನಿರೀಕ್ಷೆಯಲ್ಲಿದ್ದ ರೈತರಿಗೆ ರಾತ್ರೋರಾತ್ರಿ ವರುಣದೇವ ಆಘಾತವನ್ನುಂಟು ಮಾಡಿದ್ದಾನೆ. ಕಳೆದ ಮೂರು ದಿನಗಳಿಂದ ಬಿದ್ದ ಮಳೆಯಿಂದ ಸುಮಾರು ಎಕರೆಗಳಲ್ಲಿ ಮಾವು ಬೆಳೆ ನಷ್ಟವಾಗಿದ್ದು, ಈಗಾಗಲೇ ಕಂದಾಯ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸರ್ವೇ ನಡೆಸುತ್ತಿದ್ದಾರೆ.

ಜಿಲ್ಲೆಯಲ್ಲಿ ಮಳೆಯಿಂದಾಗಿ ಎಷ್ಟು ನಷ್ಟ ಉಂಟಾಗಿದೆ ಎಂದು ಸರ್ಕಾರಕ್ಕೆ ಕಳುಹಿಸಿಕೊಡಲು ಅಧಿಕಾರಿಗಳು ಕೂಡ ತೋಟಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿ ಪರಿಹಾರ ಕೊಡಿಸಲು ಮುಂದಾಗಿದ್ದಾರೆ.

ABOUT THE AUTHOR

...view details