ಕೋಲಾರ:ಬೈಕ್ಗೆ ಆಂಧ್ರ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಬೈಕ್ಗೆ ಬಸ್ ಡಿಕ್ಕಿ: ತಂದೆ-ಮಗ ಸ್ಥಳದಲ್ಲೇ ಸಾವು - ಆಂಧ್ರದ ಕುಪ್ಪಂ ಬ
ಬೈಕ್ಗೆ ಆಂಧ್ರ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಮೃತಪಟ್ಟ ತಂದೆ ಮಗ
ಜಿಲ್ಲೆಯ ಕೆಜಿಎಫ್ ಗಡಿ ಭಾಗದ ಆಂಧ್ರದ ಕುಪ್ಪಂ ಬಳಿ ಅಪಘಾತ ನಡೆದಿದ್ದು, ಅಪಘಾತದಲ್ಲಿ ತಂದೆ-ಮಗ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಗ್ನ ಪತ್ರಿಕೆ ನೀಡಲು ಬೈಕ್ನಲ್ಲಿ ಹೋಗುತ್ತಿದ್ದ ಬಂಗಾರಪೇಟೆ ತಾಲೂಕಿನ ಚಿಕ್ಕತುಮಟಗೆರೆ ಗ್ರಾಮದ ವೆಂಕಟೇಶ್ (57), ಕನಕರಾಜ್ (27)ಗೆ ಆಂಧ್ರದ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತನ್ನ ದೊಡ್ಡ ಮಗನ ವಿವಾಹ ಪತ್ರಿಕೆಗಳನ್ನು ಹಂಚಲು ಹೋಗುತ್ತಿದ್ದಾಗ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಆಂಧ್ರದ ರಾಳ್ಳಬೂದಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.