ಕೋಲಾರ:ಪೌರತ್ವ (ತಿದ್ದುಪಡಿ) ಕಾಯ್ದೆ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಯು.ಟಿ.ಖಾದರ್ ಪ್ರಚೋದನಕಾರಿಯಾಗಿ ಮಾತನಾಡುವ ಮೂಲಕ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದ್ದಾರೆ.
ಮಂಗಳೂರು ಗಲಭೆಗೆ ಕಾಂಗ್ರೆಸ್ ಕಾರಣ: ಸಂಸದ ಎಸ್.ಮುನಿಸ್ವಾಮಿ ಆರೋಪ - Mangalore riot minister H. Nagesh's response
ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ಮಂಗಳೂರಿನಲ್ಲಿ ಸಂಭವಿಸಿದ ಗಲಭೆ ಬಗ್ಗೆ ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಪ್ರತಿಕ್ರಿಯಿಸಿದ್ದು, ಗಲಭೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದಿದ್ದಾರೆ.
![ಮಂಗಳೂರು ಗಲಭೆಗೆ ಕಾಂಗ್ರೆಸ್ ಕಾರಣ: ಸಂಸದ ಎಸ್.ಮುನಿಸ್ವಾಮಿ ಆರೋಪ Mangalore riots are the latest news](https://etvbharatimages.akamaized.net/etvbharat/prod-images/768-512-5485143-thumbnail-3x2-hrs.jpg)
ಮಂಗಳೂರು ಗಲಭೆಯ ಸಿಸಿಟಿವಿ ದೃಶ್ಯ ಬಿಡುಗಡೆ ಬಗ್ಗೆ ಮಾತನಾಡಿ, ಪೌರತ್ವ ಕಾಯ್ದೆಯಿಂದಾಗಿ ದೇಶದ ಯಾವುದೇ ಧರ್ಮದವರಿಗೂ ತೊಂದರೆಯಾಗುವುದಿಲ್ಲ. ಕಾಂಗ್ರೆಸ್ನವರು ವೋಟಿಗಾಗಿ ಯುವಕರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪೌರತ್ವ ಕಾಯ್ದೆಯಿಂದ ನಾವು ಈ ದೇಶದ ಪ್ರಜೆ ಎಂದು ಕಾಂಗ್ರೆಸ್ನವರಿಗೆ ಅರಿವಾಗಿದೆ. ಹೀಗಾಗಿ ಈ ಹಿಂದೆ ಪ್ರತಿಭಟನೆಗಳು ನಡೆದರೆ ಪಾಕಿಸ್ತಾನದ ಬಾವುಟಗಳು ಹಾರಾಡುತ್ತಿದ್ದವು, ಈಗ ಭಾರತ ಬಾವುಟಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಮಾತನಾಡಿ, ಮಂಗಳೂರಿನಲ್ಲಿ ಕಿಡಿಗೇಡಿಗಳು ಮಾಡಿರುವ ವಿಧ್ವಂಸಕ ಕೃತ್ಯ ಕಾಂಗ್ರೆಸ್ ಪ್ರೇರಣೆಯಿಂದ ಆಗಿದೆ. ಆಡಳಿತ ಪಕ್ಷದ ವಿರುದ್ಧ ಪ್ರತಿಪಕ್ಷಗಳು ಜನರನ್ನು ರೊಚ್ಚಿಗೇಳಿಸುತ್ತಿವೆ. ಮಂಗಳೂರಿನಲ್ಲಿ ಮುಖವಾಡ ಧರಿಸಿ ಗಲಭೆ ನಡೆಸಿದವರ ಕುರಿತು ಎರಡು ಹಂತಗಳಲ್ಲಿ ತನಿಖೆ ಪ್ರಾರಂಭಿಸಿದ್ದಾರೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದರು.