ಕರ್ನಾಟಕ

karnataka

ETV Bharat / state

ರಸ್ತೆ-ಚರಂಡಿ ಕಾಮಗಾರಿ ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಡಿಸಿ ತಾಕೀತು! - ರಸ್ತೆ- ಚರಂಡಿ ಕಾಮಗಾರಿ ಮುಗಿಸುವಂತೆ ಜಿಲ್ಲಾದಿಕಾರಿ ಸತ್ಯಭಾಮ ಆದೇಶ

ನಗರದಲ್ಲಿನ ಪ್ರಮುಖ ರಸ್ತೆಗಳ ಅಗಲೀಕರಣದ ಜತೆಗೆ ಡಾಂಬರೀಕರಣಗೊಳಿಸಲಾಗುತ್ತಿದೆ. ಫುಟ್‍ಪಾತ್ ಮೇಲೆ ಅಂಗಡಿಗಳನ್ನು ಇಟ್ಟಿದ್ದರೆ ಲೈಸನ್ಸ್ ರದ್ದುಗೊಳಿಸಲಾಗುತ್ತದೆ. ಕೋಲಾರ ಜನರ ಹಿತದೃಷ್ಟಿಯಿಂದ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ..

dc-orders-to-authorities-to-complete-road-and-sewer-soon
ರಸ್ತೆ- ಚರಂಡಿ ಕಾಮಗಾರಿ ಪರಿಶೀಲಿಸಿದ ಡಿಸಿ

By

Published : Feb 7, 2021, 4:49 PM IST

Updated : Feb 7, 2021, 9:14 PM IST

ಕೋಲಾರ :ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರು ನಗರ ಪ್ರದಕ್ಷಿಣೆ ಹಾಕಿದ್ದು, ನನೆಗುದಿಗೆ ಬಿದ್ದಿರುವ ರಸ್ತೆ, ಚರಂಡಿ ಕಾಮಗಾರಿ ಶೀಘ್ರ ಮುಗಿಸುವಂತೆ ನಗರಸಭೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ನಗರದ ಚಿಕ್ಕಬಳ್ಳಾಪುರ ರಸ್ತೆಯಲ್ಲಿನ ರಹಮತ್ ನಗರ, ಅರಹಳ್ಳಿಗೇಟ್, ಟೋಲ್‍ಗೇಟ್ ಸಮೀಪ ಹದಗೆಟ್ಟಿರುವ ರಸ್ತೆಗಳನ್ನು ವೀಕ್ಷಿಸಿದ ಅವರು, ಅಂಗಡಿ ಮಾಲೀಕರು, ಹೋಟೆಲ್ ಮಾಲೀಕರು ಫುಟ್‍ಪಾತ್​ ಒತ್ತುವರಿ ಮಾಡಿಕೊಂಡಿರುವುದನ್ನು ಕಂಡು ಕೆಂಡಾಮಂಡಲರಾದರು.

ರಸ್ತೆ- ಚರಂಡಿ ಕಾಮಗಾರಿ ಪರಿಶೀಲಿಸಿದ ಡಿಸಿ

ಮುಖ್ಯರಸ್ತೆಯ ಪಕ್ಕದಲ್ಲೇ ಕಸದ ರಾಶಿ ಕಂಡ ಜಿಲ್ಲಾಧಿಕಾರಿ ಸಿ.ಸತ್ಯಭಾಮ, ನಾವೇನು ಕೆಲಸವಿಲ್ಲದೆ ರಸ್ತೆಗಳನ್ನು, ಚರಂಡಿಗಳನ್ನು ಅಭಿವೃದ್ಧಿಪಡಿಸುತ್ತಿಲ್ಲ. ನಮ್ಮ ಅಧಿಕಾರಿಗಳು ಮನೆಮನೆಗೆ ಬಂದು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಸಾಧ್ಯವಿಲ್ಲ, ಜನರೇ ಸ್ವಯಂ ಪ್ರೇರಿತರಾಗಿ ನಗರದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕಡ್ಡಾಯವಾಗಿ ಕಸದ ಬುಟ್ಟಿಗಳನ್ನು ಇಟ್ಟುಕೊಂಡು ನಗರಸಭೆಯ ಕಸದ ವಾಹನ ಬಂದಾಗ ಕೊಡಬೇಕು ಎಂದು ಮಾಲೀಕರಿಗೆ ತಾಕೀತು ಮಾಡಿದರು.

ಓದಿ:ಉಡುಪಿ ಬಳಿ ಭಗ್ನವಾಗಿರುವ ಪುರಾತನ ವಿಷ್ಣುಮೂರ್ತಿ ಪತ್ತೆ: ಇದಕ್ಕಿದೆ 800 ವರ್ಷಗಳ ಇತಿಹಾಸ!

ನಗರದಲ್ಲಿನ ಪ್ರಮುಖ ರಸ್ತೆಗಳ ಅಗಲೀಕರಣದ ಜತೆಗೆ ಡಾಂಬರೀಕರಣಗೊಳಿಸಲಾಗುತ್ತಿದೆ. ಫುಟ್‍ಪಾತ್ ಮೇಲೆ ಅಂಗಡಿಗಳನ್ನು ಇಟ್ಟಿದ್ದರೆ ಲೈಸನ್ಸ್ ರದ್ದುಗೊಳಿಸಲಾಗುತ್ತದೆ. ಕೋಲಾರ ಜನರ ಹಿತದೃಷ್ಟಿಯಿಂದ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.

ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕೋರಿದರು. ಕಡ್ಡಾಯವಾಗಿ ಸಂಚಾರಿ ನಿಯಮ ಪಾಲನೆಯಾಗಬೇಕು, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನಗಳನ್ನು ನಿಲುಗಡೆ ಮಾಡುವವರನ್ನು ಪೊಲೀಸರು ತಡೆಯಬೇಕೆಂದು ತಾಕೀತು ಮಾಡಿದರು.

Last Updated : Feb 7, 2021, 9:14 PM IST

ABOUT THE AUTHOR

...view details