ಕರ್ನಾಟಕ

karnataka

ETV Bharat / state

ರೈತರಿಗೆ ಪರಿಹಾರ ಹಣ ನೀಡುವಲ್ಲಿ ವಿಳಂಬ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ನಾರಾಯಣ ಗೌಡ - Minister Narayana Gowda Visited Koalar

ರೈತರಿಗೆ ಸಿಗಬೇಕಾದ ಪರಿಹಾರ ಹಣವನ್ನು ನೀಡದ ಕೋಲಾರ ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಚಿವ ನಾರಾಯಣ ಗೌಡ ತೀವ್ರ ತರಾಟೆಗೆ ತೆಗೆದುಕೊಂಡರು.

Delay in relief from Kolar Agriculture Dept officials
ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ನಾರಾಯಣ ಗೌಡ

By

Published : Sep 14, 2020, 6:41 PM IST

ಕೋಲಾರ:ಲಾಕ್ ಡೌನ್​ ಸಂದರ್ಭದಲ್ಲಿ ರೈತರಿಗೆ ನೀಡಬೇಕಿದ್ದ ಪರಿಹಾರ ಹಣವನ್ನು ಇನ್ನೂ ನೀಡದಿರುವುದಕ್ಕೆ ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಕೆ.ಸಿ ನಾರಾಯಣ ಗೌಡ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಜಿಲ್ಲೆಯ ಶ್ರೀನಿವಾಸಪುರ ಹೊಗಳಗೆರೆಯ ಮಾವು ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ನಾರಾಯಣ ಗೌಡ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ನಮಗೆ ಇನ್ನೂ ಹಣ ತಲುಪಿಲ್ಲ ಎಂದು ರೈತರು ಸಚಿವರ ಮುಂದೆ ದೂರು ನೀಡಿದರು.

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ನಾರಾಯಣ ಗೌಡ

ಈ ವೇಳೆ ಅಧಿಕಾರಿಗಳ ವಿರುದ್ಧ ಗರಂ ಆದ ಸಚಿವರು, ರೈತರಿಂದ ದೂರುಗಳು ಬರುತ್ತಿದ್ದರೆ ನಮಗೆ ಮುಜುಗರವಾಗುತ್ತದೆ. ಲಾಕ್ ಡೌನ್​ ಸಮಯದಲ್ಲಿ ನೀವೆನ್ ಮನೆಯಲ್ಲಿ ಮಲಗಿದ್ರಾ. ಐದಾರು ದಿನಗಳೊಳಗೆ ರೈತರಿಗೆ ತಲುಪಬೇಕಾದ ಹಣ ಅವರ ಖಾತೆಗಳಿಗೆ ಜಮಾ ಆಗದಿದ್ದರೆ ನಿಮ್ಮ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ವೇಣುಗೋಪಾಲ್ ಮತ್ತು ಅಧಿಕಾರಿಗಳು ಸಾಥ್​ ನೀಡಿದರು.

ABOUT THE AUTHOR

...view details