ಕರ್ನಾಟಕ

karnataka

ETV Bharat / state

ಹೊತ್ತಿ ಉರಿದ ಬೈಕ್​ : ಪ್ರತಿಭಟನಾಕಾರರು ಚೆಲ್ಲಾಪಿಲ್ಲಿ

ಕೆಜಿಎಫ್ ನಗರದ ಗಾಂಧಿ ವೃತ್ತದಲ್ಲಿರುವ ಪೆಟ್ರೋಲ್ ಬಂಕ್ ಬಳಿ, ಕೆಜಿಎಫ್ ಶಾಸಕಿ ರೂಪಾ ಶಶಿಧರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

By

Published : Jun 12, 2021, 4:07 PM IST

Fire on bike to protest in kolar
ಪ್ರತಿಭಟನೆ ವೇಳೆ ಹೊತ್ತಿ ಉರಿದ ಬೈಕ್​

ಕೋಲಾರ : ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬೈಕಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುವ ಮೂಲಕ ಪ್ರತಿಭಟನೆ ನಡೆಸಿದ ಘಟನೆ ಕೆಜಿಎಫ್ ನಲ್ಲಿ ಜರುಗಿದೆ.

ಪ್ರತಿಭಟನೆ ವೇಳೆ ಹೊತ್ತಿ ಉರಿದ ಬೈಕ್​

ಈ ವೇಳೆ ರಸ್ತೆ ಮಧ್ಯೆ ಬೈಕ್ ಧಗಧಗನೆ ಹೊತ್ತಿ ಉರಿದಿದ್ದು, ಕೆಲ ಕಾಲ ಆಂತಕ ಸೃಷ್ಟಿಯಾಗಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಕೆಜಿಎಫ್ ನಗರದ ಗಾಂಧಿ ವೃತ್ತದಲ್ಲಿರುವ ಪೆಟ್ರೋಲ್ ಬಂಕ್ ಬಳಿ, ಕೆಜಿಎಫ್ ಶಾಸಕಿ ರೂಪಾ ಶಶಿಧರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಇನ್ನು ನಗರಸಭೆ ಅಧ್ಯಕ್ಷ ವಲ್ಲಾಳ ಮುನಿಸ್ವಾಮಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು.

ABOUT THE AUTHOR

...view details