ಕೋಲಾರ: ಚಿನ್ನದ ನಾಡಿನಲ್ಲಿ 73 ನೇ ಸ್ವತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ರಾಷ್ಟ್ರೀಯ ಹಬ್ಬವನ್ನ ಆಚರಣೆ ಮಾಡಲಾಯಿತು.
ಉಸ್ತುವಾರಿ ಸಚಿವರಿಲ್ಲದೆ ಧ್ವಜಾರೋಹಣ ನೆರವೇರಿಸಿದ ಕೋಲಾರ ಡಿ.ಸಿ
ಉಸ್ತುವಾರಿ ಸಚಿವರಿಲ್ಲದ ಕಾರಣ, ದ್ವಜಾರೋಹಣ ನೆರವೇರಿಸಿ ಗೌರವವಂದನೆ ಸ್ವೀಕರಿಸಿದ ಕೋಲಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್, ಜಿಲ್ಲಾಡಳಿತದ ವತಿಯಿಂದ ಕೈಗೊಂಡಿರುವ ಅಭಿವೃದ್ದಿ ಕಾರ್ಯಗಳ ಕುರಿತು ಸುದೀರ್ಘ ಭಾಷಣ ಮಾಡಿದ್ರು.
ಉಸ್ತುವಾರಿ ಸಚಿವರಿಲ್ಲದ ಕಾರಣ, ದ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದ ಕೋಲಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್, ಜಿಲ್ಲಾಡಳಿತದ ವತಿಯಿಂದ ಕೈಗೊಂಡಿರುವ ಅಭಿವೃದ್ದಿ ಕಾರ್ಯಗಳ ಕುರಿತು ಸುದೀರ್ಘ ಭಾಷಣ ಮಾಡಿದ್ರು.
ಇನ್ನೂ ಸ್ವತಂತ್ರ್ಯ ದಿನಾಚರಣೆಯಲ್ಲಿ ಸಂಸದ ಎಸ್.ಮುನಿಸ್ವಾಮಿ, ಕೋಲಾರ ಶಾಸಕ ಶ್ರೀನಿವಾಸಗೌಡ, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸ್ಥಳಿಯ ಜನ ಪ್ರತಿನಿಧಿಗಳು ಭಾಗಿಯಾಗಿದ್ರು. ಇದೆ ವೇಳೆ 24 ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಪಥ ಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ನಡೆಸಿಕೊಟ್ಟರು.