ಕರ್ನಾಟಕ

karnataka

ETV Bharat / state

ಆಮಂತ್ರಣ ಪತ್ರಿಕೆ ನೀಡುವ ನೆಪದಲ್ಲಿ ಮನೆ ದರೋಡೆ - ಈಟಿವಿ ಭಾರತ ಕನ್ನಡ

ಕೋಲಾರದಲ್ಲಿ ಮದುವೆ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಮನೆಗೆ ಬಂದ ದರೋಡೆಕೋರರು, ಮನೆಯಲ್ಲಿದ್ದ ಮಹಿಳೆಗೆ ಸ್ಪ್ರೇ ಹಾಕಿ ಪ್ರಜ್ಞೆ ತಪ್ಪಿಸಿ ನಗನಾಣ್ಯ ದೋಚಿ ಪರಾರಿಯಾಗಿದ್ದಾರೆ.

house-robbery-by-the-name-of-giving-invitation-at-kolar
ಆಮಂತ್ರಣ ಪತ್ರಿಕೆ ನೀಡುವ ನೆಪದಲ್ಲಿ ಮನೆ ದರೋಡೆ

By

Published : Sep 24, 2022, 3:07 PM IST

ಕೋಲಾರ :ಮದುವೆ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಮನೆಗೆ ಬಂದ ದರೋಡೆಕೋರರು, ಮನೆಯಲ್ಲಿದ್ದ 43 ಲಕ್ಷ ನಗದು ಹಾಗೂ 250 ಗ್ರಾಂ‌ ಚಿನ್ನಾಭರಣವನ್ನು ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಸಂಪಂಗೆರೆ ಗ್ರಾಮದಲ್ಲಿ ನಡೆದಿದೆ. ಸಂಪಂಗೆರೆ ಗ್ರಾಮದ ನಿವಾಸಿ ಮಂಜುನಾಥ್ ಎಂಬುವರ ಮನೆಯಲ್ಲಿ ದರೋಡೆ ನಡೆದಿದೆ.

ಕಳೆದ ರಾತ್ರಿ ಮನೆಯಲ್ಲಿ ಮಂಜುನಾಥ್ ಅವರ ಪತ್ನಿ ಮಮತಾ ಅವರು ಒಬ್ಬರೇ ಮನೆಯಲ್ಲಿದ್ದರು. ಈ ವೇಳೆ, ಯಾರೂ ಇಲ್ಲದಿರುವುದನ್ನು ಗಮನಿಸಿರುವ ದರೋಡೆಕೋರರು, ಮದುವೆ ಆಹ್ವಾನ ಪತ್ರಿಕೆಯನ್ನು ನೀಡುವ ನೆಪದಲ್ಲಿ ಮನೆಗೆ ಬಂದಿದ್ದಾರೆ. ಮನೆಯಲ್ಲಿದ್ದ ಮಹಿಳೆ ವಿಳಾಸ ಪರಿಚಯ ಕೇಳುವ ಸಂದರ್ಭದಲ್ಲಿ ಆಕೆಗೆ ಪ್ರಜ್ಞೆ ತಪ್ಪುವ ಸ್ಪ್ರೇ ಮಾಡಿ ಮನೆಯಲ್ಲಿದ್ದ ಹಣ ಒಡವೆ ದೋಚಿ ಪರಾರಿಯಾಗಿದ್ದಾರೆ.

ಇನ್ನು ಇತ್ತೀಚೆಗಷ್ಟೆ ಜಮೀನು ಮಾರಾಟ ಮಾಡಿ ಬಂದಿದ್ದ ಸುಮಾರು 43 ಲಕ್ಷ ರೂಪಾಯಿಯನ್ನು ಮನೆಯಲ್ಲಿ ಇಟ್ಟಿದ್ದರು. ಇನ್ನು ಸ್ಥಳಕ್ಕೆ ಮಾಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ‌ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ :ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.. ನಾಲ್ವರು ಆರೋಪಿಗಳ ಬಂಧನ

ABOUT THE AUTHOR

...view details