ಕರ್ನಾಟಕ

karnataka

ETV Bharat / state

ಮದುವೆಯಾದ ಆರು ತಿಂಗಳಿಗೇ ಕೌಟುಂಬಿಕ ಕಲಹ: ಪತ್ನಿ ಕೊಂದು ನೇಣಿಗೆ ಶರಣಾದ ಪತಿ - ಕೌಟುಂಬಿಕ ಕಲಹ

ದಂಪತಿಗಳ ನಡುವೆ ಜಗಳ ನಡೆದು ಪತಿ ,ಪತ್ನಿಯನ್ನು ಕೊಂದು ಆತನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕು ಕಮ್ಮಸಂದ್ರ ಗ್ರಾಮದಲ್ಲಿ ಜರುಗಿದೆ.

ಪತ್ನಿ ಕೊಂದು ನೇಣಿಗೆ ಶರಣಾದ ಪತಿ
husband and wife died in kolar

By

Published : Jan 12, 2020, 4:48 PM IST

ಕೋಲಾರ :ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣಾಗಿರುವ ಘಟನೆ ತಾಲೂಕು ಕಮ್ಮಸಂದ್ರ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.

ಮೋಹನ್​ ಹಾಗೂ ಪದ್ಮ ಮೃತ ದಂಪತಿ. ಕಳೆದ ಆರು ತಿಂಗಳ ಹಿಂದಷ್ಟೇ ಇವರು ಮದುವೆಯಾಗಿದ್ದರು. ಆದರೆ ನಿನ್ನೆ ರಾತ್ರಿ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದು, ಕೋಪದಲ್ಲಿ ಮೋಹನ್​ ಪತ್ನಿ ಪದ್ಮಾಗೆ ಹೊಡೆದಿದ್ದಾನೆ. ಈ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಪದ್ಮಾ ಅಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಗಾಬರಿಗೊಂಡ ಮೋಹನ್​ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ABOUT THE AUTHOR

...view details