ಕರ್ನಾಟಕ

karnataka

By

Published : Jan 7, 2020, 10:00 PM IST

ETV Bharat / state

ಕಾನೂನು ಪಾಲನೆ ಮಾಡದವರ ವಿರುದ್ಧ ನಿರ್ದಿಷ್ಟ ಕ್ರಮ: ಜಿಲ್ಲಾಧಿಕಾರಿ ಜೆ.ಮಂಜುನಾಥ್

ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಕಾನೂನು ಪಾಲನೆ ಮಾಡದವರ ವಿರುದ್ಧ ನಿರ್ಧಿಷ್ಟ ಕ್ರಮ ವಹಿಸಬೇಕಾಗುತ್ತೆ ಎಂದು ಜೆ. ಜಿಲ್ಲಾಧಿಕಾರಿ ಮಂಜುನಾಥ್ ಎಚ್ಚರಿಸಿದ್ದಾರೆ.

District Collector Manjunath
ಲ್ಲಾಧಿಕಾರಿ ಮಂಜುನಾಥ್ ಸುದ್ದಿಗೋಷ್ಠಿ

ಕೋಲಾರ:ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಕಾನೂನು ಪಾಲನೆ ಮಾಡದವರ ವಿರುದ್ಧ ನಿರ್ದಿಷ್ಟ ಕ್ರಮ ವಹಿಸಬೇಕಾಗುತ್ತೆ ಎಂದು ಜೆ. ಜಿಲ್ಲಾಧಿಕಾರಿ ಮಂಜುನಾಥ್ ಹೇಳಿದ್ದಾರೆ. ಜನವರಿ 4ರಂದು ಪೌರತ್ವ ಕಾಯ್ದೆ ಬೆಂಬಲಿಸಿ ನಡೆದ ರ್‍ಯಾಲಿಯ ವೇಳೆ ಕೋಲಾರ ಸಂಸದ ಎಸ್. ಮುನಿಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಕುರಿತು ಮಾತನಾಡಿದ ಅವರು, ನಾವು ಸರ್ಕಾರಿ ಅಧಿಕಾರಿಗಳು ಕಾನೂನು ಪ್ರಕಾರ ಏನು ಕೆಲಸ ಮಾಡಬೇಕೋ ಅದನ್ನು ಮಾಡುತ್ತೇವೆ. ಯಾರು ಏನು ಬೇಕಾದ್ರೂ ಹೇಳಬಹುದು ಎಂದರು.

ಜಿಲ್ಲಾಧಿಕಾರಿ ಜೆ. ಮಂಜುನಾಥ್ ಸುದ್ದಿಗೋಷ್ಠಿ

ಇನ್ನು ಜವಾಬ್ದಾರಿ ಅರಿತು ಕೆಲಸ ಮಾಡಿದ್ರೆ ಯಾವ ಸಮಸ್ಯೆಯೂ ಬರಲ್ಲ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ್ರೆ ಪರಿಸ್ಥಿತಿ ಎದುರಿಸಬೇಕಾಗುತ್ತೆ ಎಂದು ಪರೋಕ್ಷವಾಗಿ ಸಂಸದರಿಗೆ ಟಾಂಗ್ ನೀಡಿದರು. ಕೆಲವರು ಇದರಲ್ಲಿ ಅನುಕೂಲ ತೆಗೆದುಕೊಂಡಿದ್ದಾರೆ ಅನ್ನೋದು ನನ್ನ ಭಾವನೆ. ಮುಂದೆ ಆಗುವ ಅನಾಹುತಗಳನ್ನು ತಡೆಗಟ್ಟಿದ್ದ ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಬಳಿ ಪ್ರತಿಯೊಂದು ಘಟನೆಗಳ ವಿಡಿಯೋ ಸಾಕ್ಷಿಗಳಿವೆ. ಸಂಸದ ಎಸ್. ಮುನಿಸ್ವಾಮಿ ಸೇರಿ 18ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದರು.

ಇನ್ನು ನಾಳೆಯ ಬಂದ್ ಕುರಿತು ಇನ್ನೂ ಅಂತಿಮ ನಿರ್ಣಯಕ್ಕೆ ಬಂದಿಲ್ಲ. ಮುಂದಿನ ಬೆಳವಣಿಗೆ ನೋಡಿ ನಿರ್ಧಾರ ತೆಗೆದುಕೊಳ್ಳುತ್ತೇನೆ. ಬಂದ್ ಮಾಡುವ ಕುರಿತು ಇದುವರೆಗೂ ಯಾವುದೇ ಮನವಿ ಬಂದಿಲ್ಲ ಎಂದು ಅವರು ತಿಳಿಸಿದ್ರು.

For All Latest Updates

TAGGED:

ABOUT THE AUTHOR

...view details