ಕೋಲಾರ:ಸ್ಥಳೀಯ ಮುಖಂಡರೊಬ್ಬರು ತಮ್ಮ ಬಾಯಿ ಚಪಲಕ್ಕೆ ಮಹತ್ವಾಕಾಂಕ್ಷೆ ಯೋಜನೆಯಾದ ಎತ್ತಿನಹೊಳೆ ಕಾಮಗಾರಿಯ ಕ್ರೆಡಿಟ್ಅನ್ನು ತೆಗೆದುಕೊಳ್ಳುತ್ತಿದ್ದಾರೆಂದು ಪರೋಕ್ಷವಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ಗೆ ವೈದ್ಯಕೀಯ ಸಚಿವ ಸುಧಾಕರ್ ಟಾಂಗ್ ನೀಡಿದರು.
ರಮೇಶ್ ಕುಮಾರ್ ಅವರ ಹೆಸರನ್ನ ಪ್ರಸ್ತಾಪಿಸದೇ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಲ್ಲಿನ ಸ್ಥಳೀಯ ಮುಖಂಡರೊಬ್ಬರು ತಮ್ಮ ಬಾಯಿ ಚಪಲಕ್ಕಾಗಿ ಎತ್ತಿನಹೊಳೆ ಯೋಜನೆಯ ಕ್ರೆಡಿಟ್ಅನ್ನು ತೆಗೆದುಕೊಳ್ಳುವುದಕ್ಕಾಗಿ ಹೊರಟಿದ್ದಾರೆ. ಆದರೆ, ಇದರ ನಿಜವಾದ ಕನಸನ್ನ ಕಂಡಿದ್ದವರು ಆಗಿನ ಮುಖ್ಯಮಂತ್ರಿಗಳಾಗಿದ್ದ ಸದಾನಂದಗೌಡ ಎಂದು ಹೇಳುವ ಮೂಲಕ ಮಾಜಿ ಸ್ಪೀಕರ್ಗೆ ಟಾಂಗ್ ನೀಡಿದರು.