ಕರ್ನಾಟಕ

karnataka

ETV Bharat / state

ಚಿನ್ನದ ನಗರಿಗಿಂದು ರಾಹುಲ್​ ಲಗ್ಗೆ... ಮುನಿಯಪ್ಪ ಪರ ರಣಕಹಳೆ! - undefined

ಲೋಕಸಮರ ನಿಮಿತ್ತ ಇಂದು ಮಂಗಳೂರು ಹಾಗೂ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದರೆ, ಚಿನ್ನದ ನಗರಿ ಕೋಲಾರಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಲಗ್ಗೆ ಇಡುತ್ತಿದ್ದಾರೆ. ಇಲ್ಲಿ ಮೈತ್ರಿ ಅಭ್ಯರ್ಥಿ ಪರ ಮತಯಾಚನೆ ಮಾಡಲಿದ್ದಾರೆ.

ಕೋಲಾರದಲ್ಲಿಂದು ರಾಹುಲ್​ ರಣಕಹಳೆ

By

Published : Apr 13, 2019, 10:51 AM IST

ಕೋಲಾರ:ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ರಣಕಹಳೆ ಊದಲು ಕೋಲಾರಕ್ಕೆ ಆಗಮಿಸಲಿದ್ದಾರೆ.

ಕೋಲಾರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಪರಿವರ್ತನಾ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಕೆ.ಹೆಚ್.ಮುನಿಯಪ್ಪ ಪರ ಮತಯಾಚನೆ ಮಾಡಲಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ ದೇವನಹಳ್ಳಿಯಿಂದ ಕೋಲಾರಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸುವ ರಾಹುಲ್ ಗಾಂಧಿ, ಕೋಲಾರದಲ್ಲಿ ನಡೆಯುವ ಕಾಂಗ್ರೆಸ್ ಬಹಿರಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿಗೆ ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಥ್ ನೀಡಲಿದ್ದಾರೆ.

ಕೋಲಾರದಲ್ಲಿಂದು ರಾಹುಲ್​ ರಣಕಹಳೆ

ಬಿಗಿ ಬಂದೋಬಸ್ತ್​...

ಇನ್ನು ಬಂದೋಬಸ್ತ್ ಕುರಿತು ಜಿಲ್ಲಾ ರಕ್ಷಣಾಧಿಕಾರಿ ರೋಹಿಣಿ ಕಟೋಚ್ ಮಾತನಾಡಿ, 5 ಎಸ್​ಪಿ, 3 ಎಎಸ್​ಪಿ, 200 ಮಂದಿ ಅಧಿಕಾರಿಗಳು, 10 ಸಿಆರ್​ಪಿಎಫ್ ತುಕಡಿಗಳು ಸೇರಿದಂತೆ 1 ಸಾವಿರ ಮಂದಿಯನ್ನು ನಿಯೋಜನೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರುವಂತಹ ವಾಹನಗಳಿಗೆ ಪ್ರತ್ಯೇಕ ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

For All Latest Updates

TAGGED:

ABOUT THE AUTHOR

...view details