ಕರ್ನಾಟಕ

karnataka

ETV Bharat / state

SSLC ವಿದ್ಯಾರ್ಥಿನಿಗೆ ಕೊರೊನಾ: ನಾಳೆ ಪರೀಕ್ಷೆ ಬರೆಯುವುದಕ್ಕೆ ಜಿಲ್ಲಾಡಳಿತದಿಂದ ತಡೆ - ಎಸ್​ಎಸ್​​ಎಲ್​​ಸಿ ವಿದ್ಯಾರ್ಥಿನಿಗೆ ಕೊರೊನಾ ಸುದ್ದಿ

ನಾಳೆ SSLC ಪರೀಕ್ಷೆಗೆ ಹಾಜರಾಗಬೇಕಿದ್ದ ಕೋಲಾರ ಜಿಲ್ಲೆಯ ವಿದ್ಯಾರ್ಥಿನಿಯೋರ್ವಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಪರೀಕ್ಷೆ ಬರೆಯುವುದನ್ನು ತಡೆ ಹಿಡಿಯಲಾಗಿದೆ. ಮುಂದಿನ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.

positive
ವಿದ್ಯಾರ್ಥಿನಿಗೆ ಕೊರೊನಾ

By

Published : Jun 24, 2020, 5:40 PM IST

ಕೋಲಾರ:ನಾಳೆ ಎಸ್​ಎಸ್​​ಎಲ್​​ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕು ವ್ಯಾಪ್ತಿಯ SSLC ವಿದ್ಯಾರ್ಥಿನಿಯೋರ್ವಳಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ಈ ಬಾರಿಯ ಎಸ್​ಎಸ್​​ಎಲ್​​ಸಿ ಪರೀಕ್ಷೆ ಬರೆಯುವುದಕ್ಕೆ ತಡೆ ನೀಡಲಾಗಿದೆ. ಇನ್ನು ಈಕೆಯನ್ನು ಬಾಲ್ಯ ವಿವಾಹದ ಅರೋಪದಡಿ ಕಳೆದ ಶನಿವಾರ ಬಾಲ ಮಂದಿರದಲ್ಲಿ ಇಡಲಾಗಿತ್ತು. ಈ ವೇಳೆ ಬಾಲಕಿಯ ಗಂಟಲು ದ್ರವ‌ ಮಾದರಿ ಟೆಸ್ಟ್ ಮಾಡಲಾಗಿತ್ತು. ಜೊತೆಗೆ ನಾಳೆ ಎಸ್​ಎಸ್​​ಎಲ್​​ಸಿ ಪರೀಕ್ಷೆ ಇದ್ದ ಹಿನ್ನೆಲೆ ಬಾಲಕಿಯ ಪೋಷಕರು ಬಾಲ ಮಂದಿರದಿಂದ ಆಕೆಯನ್ನ ಮನೆಗೆ ವಾಪಸ್​​ ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಇಂದು ಬಂದ ಲ್ಯಾಬ್​ ವರದಿಯಲ್ಲಿ ಬಾಲಕಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಹಿನ್ನೆಲೆ ನಾಳೆ ಪರೀಕ್ಷೆ ಬರೆಯಲು ಅವಕಾಶ ನೀಡದೆ‌, ಪೂರಕ ಪರೀಕ್ಷೆಯಲ್ಲಿ ಅವಕಾಶ‌ ನೀಡಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ.

ABOUT THE AUTHOR

...view details