ಕರ್ನಾಟಕ

karnataka

By

Published : Oct 24, 2019, 7:56 AM IST

ETV Bharat / state

ಒಂದು ತಿಂಗಳಲ್ಲಿ ರಾಜ್ಯ ಸರ್ಕಾರ ಏನ್ ಬೇಕಾದ್ರು ಆಗಬಹುದು: ಶಾಸಕ ಕೆ.ವೈ.ನಂಜೇಗೌಡ ಭವಿಷ್ಯ

ಬಿಜೆಪಿ ಪ್ರೇರಿತವಾಗಿ ನಡೆಸಿದ ಐಟಿ, ಇಡಿ ದಾಳಿಗಳ ವಿರುದ್ಧ ನ್ಯಾಯಾಲಯದಲ್ಲಿ ಜಯ ಸಿಕ್ಕಿದ್ದು, ಶಾಸಕ ಡಿಕೆಶಿಗೆ ಜಾಮೀನು ಮಂಜೂರಾಗಿದೆ. ರಾಜ್ಯದಲ್ಲಿ ಇನ್ನು ಒಂದು ತಿಂಗಳಲ್ಲಿ ಏನಾಗುತ್ತದೆ ಗೊತ್ತಿಲ್ಲ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.

ಶಾಸಕ ಕೆ.ವೈ.ನಂಜೇಗೌಡ

ಕೋಲಾರ: ರಾಜ್ಯ ಬಿಜೆಪಿ ಸರ್ಕಾರ ಇನ್ನೂ ಒಂದು ತಿಂಗಳಲ್ಲಿ ಏನ್​ ಬೇಕಾದ್ರು ಆಗತ್ತೆ. ಕಾಂಗ್ರೆಸ್​ಗೆ ವಂಚಿಸಿ ಹೋದವರ ಸ್ಥಿತಿ ಅತಂತ್ರವಾಗಿದೆ ಎಂದು ಮಾಲೂರು ಶಾಸಕ ಕೆ.ವೈ.ನಂಜೇಗೌಡ ಭವಿಷ್ಯ ನುಡಿದಿದ್ದಾರೆ.

ಶಾಸಕ ಕೆ.ವೈ.ನಂಜೇಗೌಡ

ಡಿಕೆಶಿಗೆ ಜಾಮೀನು ಸಿಕ್ಕ ಹಿನ್ನೆಲೆ, ಮಾಲೂರಿನಲ್ಲಿ ಸಿಹಿ ಹಂಚಿ ಸಂಭ್ರಮಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ ನಾಯಕರನ್ನು ಹಿಮ್ಮೆಟ್ಟಿಸಲು ಹೂಡಿದ ಐಟಿ, ಇಡಿ ದಾಳಿಗಳ ವಿರುದ್ಧ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ರಾಜ್ಯದಲ್ಲಿ ಕಾಂಗ್ರೆಸ್​ ಬಲಿಷ್ಠವಾಗಿರುವುದನ್ನು ಬಿಜೆಪಿ ಸಹಿಸುತ್ತಿಲ್ಲ ಎಂದು ಟೀಕಿಸಿದರು.

ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಕೆಡವಲು ಕೋಟ್ಯಂತರ ರೂಪಾಯಿ ಖರ್ಚು ಮಾಡಿದೆ. ಅದನ್ನು ಯಾವ ಅಧಿಕಾರಿಗಳು ಕೇಳುತ್ತಿಲ್ಲ. ಕ್ಯಾನ್ಸರ್​ ಕಾಯಿಲೆಯಂತೆ ಅನರ್ಹ ಶಾಸಕರು ನರಳುತ್ತಿದ್ದಾರೆ ಎಂದು ಹೇಳಿದರು.

ABOUT THE AUTHOR

...view details